Wednesday, July 9, 2025

ಡಿ.11-13: ಸುರಿಬೈಲು ಉಸ್ತಾದರ ಆಂಡ್ ನೇರ್ಚೆ- ಹನೀಫಿ ಸನದುದಾನ ಮಹಾ ಸಮ್ಮೇಳನ

ವಿಟ್ಲ: ಬಂಟ್ವಾಳ ತಾಲೂಕಿನ ಸುರಿಬೈಲು ದಾರುಲ್ ಅಶ್ ಅರಿಯಃ ಎಜುಕೇಶನಲ್ ಸೆಂಟರ್‌ನ ಸ್ಥಾಪಕರಾದ ಶೈಖುನಾ ಮರ್‌ಹೂಂ ಸುರಿಬೈಲು ಉಸ್ತಾದರ ೧೮ನೇ ಆಂಡ್ ನೇರ್ಚೆ ಹಾಗೂ ಶೈಖುನಾ ಪಿಎ ಉಸ್ತಾದರ ಅನುಸ್ಮರಣೆ ಹನೀಫಿ ಸನದುದಾನ ಮಹಾ ಸಮ್ಮೇಳನ ಡಿ.11-13 ರ ತನಕ ನಡೆಯಲಿದೆ ಎಂದು ದಾರುಲ್ ಅಶ್ ಅರಿಯಃದ ಸ್ವಾಗತ ಸಮಿತಿ ಸಂಚಾಲಕ ಕೆ.ಎ ಹಾಜಿ ಅಬ್ದುಲ್ ಹಮೀದ್ ಕೊಡಂಗಾಯಿ ತಿಳಿಸಿದರು.
ಅವರು ಸೋಮವಾರ ವಿಟ್ಲದ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಸುರಿಬೈಲು ದಾರುಲ್ ಅಶ್ ಅರಿಯಃ ಎಜುಕೇಶನಲ್ ಸೆಂಟರ್‌ನಲ್ಲಿ ಇಂಗ್ಲೀಷ್ ಮೀಡಿಯಂ ಸ್ಕೂಲ್, ವುಮೆನ್ಸ್ ಕಾಲೇಜು, ಹಿಫುಲ್‌ಳು ಕುರ್‌ಆನ್ ಕಾಲೇಜು, ಅನಾಥ ನಿರ್ಗತಿಕರ ಮಂದಿರ ಕಾರ್ಯಾಚರಿಸುತ್ತಿದೆ. ಈ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಉಚಿತವಾಗಿ ಧಾರ್ಮಿಕ ಲೌಕಿಕ, ವಿದ್ಯಾಭ್ಯಾಸ, ಊಟೋಪಾಚಾರ ಮತ್ತು ವಸತಿಗಳ ಪ್ರಯೋಜನ ಪಡೆಯುತ್ತಿದ್ದಾರೆ.
ಪ್ರತಿವರ್ಷದಂತೆ ಈ ವರ್ಷವೂ ಡಿ.೧೧ರಂದು ಬುಧವಾರ ಸಂಜೆ ಸಯ್ಯದ್ ಶಿಹಾಬುದ್ದೀನ್ ಮದಕ ಅವರ ನೇತೃತ್ವದಲ್ಲಿ ಮರ್‌ಹೂಂ ಸುರಿಬೈಲು ಉಸ್ತಾದರ ಮಕಬರ ಝಿಯಾರತ್ ಕಾರ್ಯಕ್ರಮ ಆರಂಭವಾಗಲಿದೆ. ಕೋಯ ಕಾಪಾಡ್ ಹಾಗೂ ಸಂಗಡಿಗರು ಕೋಝಿಕ್ಕೋಡ್ ಕೇರಳ ಅವರ ನೇತೃತ್ವದಲ್ಲಿ ಮಹ್‌ಳರತು ರಿಫಾಈಯ್ಯ ಮಜ್ಲೀಸ್, ಜಲಾಲಿಯ್ಯ ರಾತೀಬು ನಡೆಯಲಿದೆ.
12ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ವೈದ್ಯಕೀಯ ಶಿಬಿರ, ಸಂಜೆ 6 ಗಂಟೆಗೆ ಸೌಹಾರ್ದ ಸಂಗಮ, ರಾತ್ರಿ 8 ಗಂಟೆಗೆ ಬಾಯಾರು ತಂಙಳ್ ಅವರ ನೇತೃತ್ವದಲ್ಲಿ ಆತ್ಮೀಯ ಮಜ್ಲೀಸ್ ನಡೆಯಲಿದೆ.
13 ರಂದು ಮಧ್ಯಾಹ್ನ ಸಯ್ಯದ್ ಕುಂಬೋಳ್ ತಂಙಳ್ ಅವರ ನೇತೃತ್ವದಲ್ಲಿ ಸ್ಥಾನ ವಸ್ತ್ರ ವಿತರಣೆ, ಸಂಜೆ 4 ಗಂಟೆಗೆ ಬೋಳಂತೂರುನಿಂದ ಅಶ್ ಅರಿಯಃಕ್ಕೆ ಸಂದಲ್ ಮೆರವಣಿಗೆ ಬಳಿಕ ಸಮಾರೋಪ ಸಮ್ಮೇಳನದಲ್ಲಿ ಕೂರ ತಂಙಳ್ ನೇತೃತ್ವ ನೀಡಲಿದ್ದು, ಮೌಲನಾ ಪೆರೋಡ್ ಅಬ್ದುಲ್ ರಹಿಮಾನ್ ಸಖಾಫಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಈ ಸಂದರ್ಭ ಶೈಖುನಾ ಅಲಿಕುಂಞ ಉಸ್ತಾದ್, ಬೇಕಲ ಉಸ್ತಾದ್, ಮಾಣಿ ಉಸ್ತಾದ್, ಕಾವಳಕಟ್ಟೆ ಹಝ್ರತ್, ಮಹ್‌ಮೂದುಲ್ ಫೈಝಿ ವಾಲೆಮುಂಡೋವು ಉಸ್ತಾದ್, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಯು.ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ಯೇನೆಪೋಯ ಅಬ್ದುಲ್ಲ ಕುಂಞ, ಅಬ್ದುಲ್ ರಶೀದ್ ಝೈನಿ, ಶಾಫಿ ಸಅದಿ ಬೆಂಗಳೂರು, ಭಾಗವಹಿಸಲಿದ್ದಾರೆ. ಸಿ.ಎಚ್ ಮಹಮ್ಮದಾಲಿ ಸಖಾಫಿ ಹಾಗೂ ಇಬ್ರಾಹಿಂ ಸಖಾಪಿ ಸೆರ್ಕಳ ನಾನಾ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದಾರುಲ್ ಅಶ್ ಅರಿಯಃ ದ ಸದಸ್ಯರಾದ ಅಬ್ದುಲ್ ರಶೀದ್ ಹನೀಫಿ, ಅಬ್ದುಲ್ ವಾಜೀದ್ ಹನೀಫಿ, ಪ್ರಚಾರ ಸಮಿತಿಯ ಯು.ಎಸ್ ಉಸ್ಮಾನ್ ಹಾಜಿ, ಎಸ್‌ಎಂಯ ಉಮ್ಮರ್ ಬಾಕಿಮಾರ್, ಸಿದ್ದೀಕ್ ಕುಕ್ಕಾಜೆ ಉಪಸ್ಥಿತರಿದ್ದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...