Friday, June 27, 2025

ಯುನೈಟೆಡ್ ಎಂಪವರ್‌ಮೆಂಟ್‌ನ ಜಿಲ್ಲಾಧ್ಯಕ್ಷರಾಗಿ ಶಫೀಕ್ ಎಂ.ಎಸ್

ವಿಟ್ಲ: ರಾಜ್ಯ ಮಟ್ಟದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್‌ನ ವಿಟ್ಲ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಶಫೀಕ್ ಎಂ.ಎಸ್ ಪುಣಚ ಅವರು ಆಯ್ಕೆಯಾಗಿದ್ದಾರೆ.
ವಿಟ್ಲದ ನೀರಕಣಿಯ ಜೆಎಲ್ ಅಡಿಟೋರಿಯಂನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು ಈ ಆಯ್ಕೆ ಪ್ರಕ್ರಿಯೆ ನಡೆಸಿದರು.
ಉಪಾಧ್ಯಕ್ಷರಾಗಿ ರಿಯಾಝ್ ವಿ.ಎಚ್, ದಾವೂದು ಒಕ್ಕೆತ್ತೂರು, ಇಕ್ಬಾಲ್ ಶೀತಲ್, ಮಜೀದ್ ಕನ್ಯಾನ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷದ್ ಇಸ್ಮಾಯಿಲ್ ಚಂದಳಿಕೆ, ಜತೆ ಕಾರ್ಯದರ್ಶಿಯಾಗಿ ಇಝಾದ್ ಒಕ್ಕೆತ್ತೂರು, ರಫೀಕ್ ಪೊನ್ನೋಟ್ಟು, ಖಜಾಂಜಿಯಾಗಿ ಕೌಸರ್, ಕ್ರೀಡಾ ಕಾರ್ಯದರ್ಶಿಯಾಗಿ ನಝೀರ್ ಪುಣಚ, ಕ್ರೀಡಾಕೂಟ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಬೊಬ್ಬೆಕೇರಿ, ಅಝರ್ ಒಕ್ಕೆತ್ತೂರು, ಮಾಧ್ಯಮ ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ ಅವರನ್ನು ಆಯ್ಕೆ ಮಾಡಲಾಯಿತು.
ಕ್ರಿಕೆಟ್ ಉಸ್ತುವಾರಿಯಾಗಿ ಬಶೀರ್, ಸಿರಾಜ್ ಕಡಂಬು, ಫುಟ್‌ಬಾಲ್ ಉಸ್ತುವಾರಿಯಾಗಿ ನಾಸೀರ್ ವಿಟ್ಲ, ಕಬಡ್ಡಿ ಉಸ್ತುವಾರಿಯಾಗಿ ಸುಲೈಮಾನ್ ಒಕ್ಕೆತ್ತೂರು, ವಾಲಿಬಾಲ್ ಉಸ್ತುವಾರಿಯಾಗಿ ರಾಝಿಕ್ ಒಕ್ಕೆತ್ತೂರು, ಇತರ ಕ್ರೀಡಾ ಉಸ್ತುವಾರಿಯಾಗಿ ರಶೀದ್ ಎಂ.ಎಸ್, ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ರಾಜ್ಯಾಧ್ಯಕ್ಷ ಸಿರಾಜುದ್ದೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್, ರಾಜ್ಯ ಸಮಿತಿ ಸದಸ್ಯರಾದ ಇಬ್ರಾಹಿಂ ಗೋಳಿಕಟ್ಟೆ, ಇಕ್ಬಾಲ್ ಹಸನ್, ಸಿರಾಜ್ ಪುತ್ತೂರು, ಶರೀಫ್ ಸಾಲ್ಮರ, ಫಾರೂಕ್ ಪುತ್ತೂರು ಭಾಗವಹಿಸಿದ್ದರು.
ಸದಸ್ಯರಾದ ಶಾಕೀರ್ ಸ್ವಾಗತಿಸಿದರು. ಉಬೈದ್ ವಿಟ್ಲ ಬಜಾರ್ ವಂದಿಸಿದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...