Monday, January 26, 2026

ವಿಟ್ಲ: ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗೆ ಶಿಲಾನ್ಯಾಸ

ವಿಟ್ಲ: ದೇಶದ ಪ್ರಧಾನಿಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಕಲ್ಪನೆಯಂತೆ ಸ್ವಚ್ಛ ಭಾರತ ಮಿಷನ್ ಯೋಜನೆ ಜಾರಿಗೆ ತಂದಿದ್ದಾರೆ. ಇದರ ಮೂಲಕ ಸ್ವಚ್ಛತೆಗೆ ವಿಶೇಷ ಅನುದಾನ ನೀಡಲಾಗುತ್ತಿದೆ. ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯ ಪೂರ್ಣ ಸಮಾಜ ನಿರ್ಮಾಣಗೊಳ್ಳುತ್ತದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ಶುಕ್ರವಾರ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಳಿಕೆ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ವಚ್ಛಭಾರತ ಮಿಷನ್ ಯೋಜನೆಯಡಿಯಲ್ಲಿ 2.10 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ, ಮಾತನಾಡಿದರು. ವಿಟ್ಲ ಪಟ್ಟಣ ಪಂಚಾಯತ್ ಮೇಲ್ದರ್ಜೆಗೇರಿದ್ದು, ನಿರಂತರ ಅಭಿವೃದ್ಧಿ ಹೊಂದುತ್ತಿದೆ. ಇಲ್ಲಿಯ ಮೂಲಸೌಕರ್ಯದ ಉದ್ದೇಶಕ್ಕೆ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದೇನೆ. ವಿಟ್ಲ ತಾಲೂಕು ಕೇಂದ್ರ ಅಥವಾ ಪುರಸಭೆಯಾಗಿ ಮೇಲ್ದರ್ಜೆಗೇರುವ ಉದ್ದೇಶದಿಂದ ಕಾಯಕಲ್ಪ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಕಾರ್ಯಾಲಯಕ್ಕೆ ಅನುದಾನ ಒದಗಿಸುವ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದರು.
2.10 ಕೋಟಿ ಅನುದಾನದಲ್ಲಿ ಸಿವಿಲ್ ಕಾಮಗಾರಿ ಹಾಗೂ 1.17 ಕೋಟಿ ಅನುದಾನದಲ್ಲಿ ವಾಹನ ಹಾಗೂ ಯಂತ್ರೋಪಕರಣ ಖರೀದಿಸಲಾಗುತ್ತದೆ. ಸಿವಿಲ್ ಕಾಮಗಾರಿಯಲ್ಲಿ ವಿಂಡ್ರೋ ಪ್ಲಾಟ್ ಫಾರಂ ರಚನೆ, ಸ್ಯಾನಿಟರಿ ಲ್ಯಾಂಡ್‌ಫಿಲ್ ರಚನೆ, ಆವರಣಗೋಡೆ, ತ್ಯಾಜ್ಯ ನೀರಿನ ಸಂಸ್ಕರಣೆ ಹಾಗೂ ೧.೧೭ ಕೋಟಿ ರೂ. ಅನುದಾನದಲ್ಲಿ ಪುಶ್‌ಕಾರ್ಟ್, ಬೇಲಿಂಗ್ ಯೂನಿಟ್, ಸ್ಕ್ರೀನಿಂಗ್ ಟ್ರೋಮಲ್, ಜೆಸಿಬಿ, ಟಾಟಾ ವಾಹನ, ಆಟೋ ಟಿಪ್ಪರ್, ಟ್ರಾಕ್ಟರ್, ಟ್ರೈಲರ್‌ಗಳು ಖರೀದಿಸುವ ಮೂಲಕ ಕಾಮಗಾರಿ ನಡೆಯಲಿದೆ ಎಂದು ಎಂಜಿನಿಯರ್ ಮಾಹಿತಿ ನೀಡಿದರು.
ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಸದಸ್ಯರಾದ ಅರುಣ್ ಎಂ. ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ, ರಾಮದಾಸ್ ಶೆಣೈ, ಶ್ರೀಕೃಷ್ಣ, ರವಿಪ್ರಕಾಶ್, ಮಂಜುನಾಥ ಕಲ್ಲಕಟ್ಟ, ಲೋಕನಾಥ ಶೆಟ್ಟಿ ಕೊಲ್ಯ, ಚಂದ್ರಕಾಂತಿ, ಲತಾವೇಣಿ, ಇಂದಿತಾ ಅಡ್ಯಾಳಿ, ಸುನೀತಾ ಕೋಟ್ಯಾನ್, ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಇಂಜಿನಿಯರ್ ಶ್ರೀಧರ, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಪ್ರಧಾನ ಕಾರ್ಯದರ್ಶಿ ಉದಯ ಆಲಂಗಾರು, ಜತೆ ಕಾರ್ಯದರ್ಶಿ ಜಗದೀಶ ಪಾಣೆಮಜಲು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...