Saturday, June 28, 2025

ಲೈಂಗಿಕ ಕಿರುಕುಳ ಆರೋಪಿ ಬಂಧನ: ಹಿಂದೂ ಪರ ಸಂಘಟನೆಗಳಿಂದ ಪೊಲೀಸರಿಗೆ ಅಭಿನಂದನೆ

ವಿಟ್ಲ : ಮಾಣಿ ಪೇಟೆಯಲ್ಲಿ ಎಸ್.ಸಿ.ಮೊಬೈಲ್ ಅಂಗಡಿ ಮಾಲಕ ಅಬ್ದುಲ್  ಸಲಾಂ ತನ್ನ ಅಂಗಡಿಗೆ ಡಿ.30ರಂದು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಆತನನ್ನು ಬಂಧಿಸದೇ ಇದ್ದಲ್ಲಿ ಡಿ.16 ರಂದು ಪ್ರತಿಭಟನೆ ಹಮ್ಮಿಕೊಳ್ಳಲು ಹಿಂದೂ ಪರ ಸಂಘಟನೆಗಳು ನಿರ್ಧರಿಸಿತ್ತು. ಆದರೆ ಆರೋಪಿಯನ್ನು ಬಂಧಿಸಲಾಗಿದ್ದು ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರನ್ನು ಅಭಿನಂದಿಸುವುದರ ಜತೆಗೆ ವಕೀಲರು ಇಂತಹ ಆರೋಪಿ ಪರ ವಾದ ಮಂಡಿಸಬಾರದು ಎಂದು ವಿಶ್ವ ಹಿಂದೂ ಪರಿಷದ್, ಬಜರಂಗದಳ ಮುಖಂಡರು ವಿನಂತಿಸಿದರು.
ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ನರಸಿಂಹ ಶೆಟ್ಟಿ ಮಾಣಿ ಮಾತನಾಡಿ, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ, 20 ದಿನಗಳ ಬಳಿಕವೂ ಬಂಧಿಸಿರಲಿಲ್ಲ. ಪರಿಣಾಮವಾಗಿ ಹಿಂದೂ ಪರ ಸಂಘಟನೆಗಳು ಕೃತ್ಯವನ್ನು ಖಂಡಿಸಿ, ಜ.16ರಂದು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನ ಕೈಗೊಂಡಿತ್ತು. ತಕ್ಷಣ ಎಚ್ಚೆತ್ತ ಪೊಲೀಸ್ ಇಲಾಖೆ ಆರೋಪಿಯನ್ನು ಆದಿತ್ಯವಾರ ಬಂಧಿಸಿದೆ. ಪೊಲೀಸರ ಈ ಕಾರ್ಯಕ್ಕೆ ಅಭಿನಂದನೆಯನ್ನು ಸಲ್ಲಿಸುವುದರ ಜತೆಗೆ ಇಂತಹ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಮತಾಂಧರಿಗೆ ಯಾವುದೇ ವಕೀಲರು ವಾದ ಮಂಡಿಸಬಾರದು. ಆ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಲು ಸಹಕರಿಸಬೇಕೆಂದು ವಿನಂತಿಸುತ್ತೇವೆ. ಈ ಪ್ರಕರಣದ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಸಂಘಟನೆಗಳ ಮುಖಂಡರ ಚಾರಿತ್ರ್ಯವಧೆ ನಡೆಸುತ್ತಿರುವುದೂ ನಮ್ಮ ಗಮನಕ್ಕೆ ಬಂದಿದೆ. ಇಲಾಖೆ ಇದರ ವಿರುದ್ಧವೂ ಕ್ರಮಕೈಗೊಳ್ಳಬೇಕು ಎಂದು ಅವರು ವಿನಂತಿಸಿದರು.
ಮಾಣಿ ಸುತ್ತಮುತ್ತಲು ವ್ಯವಸ್ಥಿತವಾಗಿ ಡ್ರಗ್ ಮಾಫಿಯ ಕಾರ್ಯಾಚರಣೆ ನಡೆಸುತ್ತಿದ್ದು, ದುಷ್ಕೃತ್ಯಗಳನ್ನು ನಡೆಸುತ್ತಿದೆ. ಇಂತಹ ವ್ಯಕ್ತಿಗಳನ್ನು ಗುರುತಿಸಿ, ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲದೇ ಇದ್ದಲ್ಲಿ ಹಿಂದೂ ಸಂಘಟನೆಗಳೇ ಕಾರ್ಯಾಚರಣೆಗಿಳಿಯುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷದ್ ವಿಟ್ಲ ಪ್ರಖಂಡ ಕಾರ್ಯಾಧ್ಯಕ್ಷ ಪದ್ಮನಾಭ ಕಟ್ಟೆ, ಉಪಾಧ್ಯಕ್ಷ ಜಯ ಕೊಟ್ಟಾರಿ, ವಿಟ್ಲ ಪ್ರಖಂಡ ಬಜರಂಗದಳ ಸಂಚಾಲಕ ಅಕ್ಷಯ ರಜಪೂತ್ ಕಲ್ಲಡ್ಕ, ಗೋಳ್ತಮಜಲು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಪತ್ ಕೋಟ್ಯಾನ್ ಕಡೆಶ್ವಾಲ್ಯ ಉಪಸ್ಥಿತರಿದ್ದರು.

More from the blog

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...