Sunday, February 9, 2025

ಸಾರಡ್ಕ: ’ಸಾಧನಾ ಪಥಿಕ ವಾಟೆ’ ಕೃತಿ ಬಿಡುಗಡೆ

ವಿಟ್ಲ: ಉದ್ಯೋಗ ಎಲ್ಲಾ ಕಾಲದಲ್ಲಿ ಭದ್ರತೆಯನ್ನು ಒದಗಿಸುವುದಿಲ್ಲ. ಕೃಷಿ ಚಟುವಟಿಕೆ ಬದುಕಿನಲ್ಲಿ ಶಾಶ್ವತವಾಗಿ ಉಳಿದುಕೊಳ್ಳುತ್ತದೆ. ಶಿಕ್ಷಕ ವೃತ್ತಿ ಎಂಬುದು ಬಹಳ ಸೂಕ್ಷ್ಮದ್ದಾಗಿದ್ದು, ಉತ್ತಮ ಶಿಕ್ಷಕ ಪರಂಪರೆಯನ್ನು ಹಾಕಿ ಕೊಟ್ಟ ವ್ಯಕ್ತಿ ಹಾಗೂ ವ್ಯಕ್ತಿತ್ವವನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಪೂರ್ವ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಹೇಳಿದರು.
ಅವರು ಸಾರಡ್ಕ ಆರಾಧನಾ ಕಲಾ ಭವನದಲ್ಲಿ ಸಾಹಿತಿ, ಅಧ್ಯಾಪಕ, ಕೃಷಿಕ, ಸಮಾಜಸ್ನೇಹಿ ವಾಟೆ ಮಹಾಲಿಂಗ ಭಟ್ಟರ ಸಾರ್ಥಕ ಜೀವನ ಸಂಚಯ ’ಸಾಧನಾ ಪಥಿಕ ವಾಟೆ’ ಕೃತಿ ಬಿಡುಗಡೆ ಮತ್ತು ಅಭಿವಂದನೆ ಕಾರ್ಯಕ್ರಮದಲ್ಲಿ ಗ್ರಂಥ ಬಿಡುಗಡೆಗೊಳಿಸಿ ಮಾತನಾಡಿದರು. ಬಡತನದ ಕಾರಣಕ್ಕಾಗಿ ವ್ಯಕ್ತಿ ಘನತೆಗೆ ನೋವು ಮಾಡುವ ಕಾರ್ಯವಾಗಬಾರದು. ಕೃತಿ ಅನುಭವವನ್ನು ಒರೆಗೆ ಹಚ್ಚುವ ಜತೆಗೆ ವಿಷಾದದ ಭಾವವನ್ನು ಹುಟ್ಟಿಸಿದರೆ, ಅದು ಉತ್ತಮ ಪುಸ್ತಕವಾಗುತ್ತದೆ. ಅನೇಕ ಕ್ಷೇತ್ರಗಳಲ್ಲಿ ಆಸಕ್ತಿ ಇಟ್ಟುಕೊಂಡು ಕೆಲಸ ಮಾಡಿದಾಗ ಅದು ಒಂದಕ್ಕೊಂದು ಪೂರಕವಾಗುತ್ತದೆ. ವಾಟೆಯವರ ಈ ಕೃತಿ ಆತ್ಮಕಥನವಲ್ಲ, ಸಮಾಜ ದಾಟಿ ಬಂದ ಸಾಂಸ್ಕೃತಿಕ ಚರಿತ್ರೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಸತ್ಯಶಂಕರ ಉಪಾಧ್ಯಾಯ ಮಣಿಮುಂಡ ಉದ್ಘಾಟಿಸಿದರು. ವಾಟೆ ಮಹಾಲಿಂಗ ಭಟ್ – ಮಹಾಲಕ್ಷ್ಮೀ ದಂಪತಿಗಳನ್ನು ಅಭಿವಂದನೆ ಮಾಡಿ ಸನ್ಮಾನಿಸಲಾಯಿತು. ಕುಟುಂಬಿಕರು, ಬಂಧುಗಳು ಹಾಗೂ ಅಭಿಮಾನಿಗಳಿಂದ ಗೌರವಾರ್ಪಣೆ ನಡೆಯಿತು.
ಬೆಳಗ್ಗೆ ಗೀತಾ ಸಂಕರ್ ಸಾರಡ್ಕ ಹಾಗೂ ಅನುರಾಧ ಅಡ್ಕಸ್ಥಳ ಅವರ ಶಿಷ್ಯವೃಂದದಿಂಡ ಶಾಸ್ತ್ರೀಯ ಸಂಗೀತ ನಡೆಯಿತು. ಮಧ್ಯಾಹ್ನ ರಂಜಿತಾ ಎಲ್ಲೂರು ಮತ್ತು ಬಳಗದವರಿಂದ ಯಕ್ಷ ನೃತ್ಯ- ಮದಿರಾಕ್ಷ ಶೃಂಗಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತು ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ವಹಿಸಿದ್ದರು. ಮಂಗಳೂರು ಬೆಸೆಂಟ್ ಕಾಲೇಜು ಪೂರ್ವ ಪ್ರಾಚಾರ್ಯ ಡಾ. ಎಂ. ಪ್ರಭಾಕರ ಜೋಶಿ ಪುಸ್ತಕ ಕುರಿತು ಮಾತನಾಡಿದರು. ಮುಂಬಯಿ ವಿಶ್ವವಿದ್ಯಾನಿಲಯದ ವಿಶ್ರಾಂತ ವಿಭಾಗ ಮುಖ್ಯಸ್ಥ ಡಾ. ತಾಳ್ತಜೆ ವಸಂತ ಕುಮಾರ ಮಾತನಾಡಿದರು.
ಶರಧಿ ಪ್ರಾರ್ಥಿಸಿದರು. ಕುರಿಯ ವಿಠಲ ಶಾಸ್ತ್ರಿ ಪ್ರತಿಷ್ಠಾನದ ಉಜಿರೆ ಅಶೋಕ ಭಟ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಎ. ಜಿ. ಭೀಮಪ್ರಕಾಶ್ ಸನ್ಮಾನ ಪತ್ರ ವಾಚಿಸಿದರು. ಡಾ. ರವಿಶಂಕರ್ ವಂದಿಸಿದರು. ಲೇಖಕ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...