ವಿಟ್ಲ: ಹಿರಿಯ ರಾಜಕಾರಣಿ, ಮಾಜಿ ಸಚಿವ, ಸಾಮಾಜಿಕ ಕಳಕಳಿಯುಳ್ಳ ಸರಳ ಸಜ್ಜನ, ಒಡಿಯೂರು ಶ್ರೀ ಸಂಸ್ಥಾನದ ಮುಖ್ಯ ಅಭಿಮಾನಿಗಳೂ ಆದ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಒಡಿಯೂರು ಶ್ರೀಗಳು ಸಂತಾಪ ವ್ಯಕ್ತಪಡಿಸಿ, ಅವರ ಆತ್ಮಕ್ಕೆ ಶಾಂತಿ ಪ್ರಾಪ್ತವಾಗಲಿ, ಅಗಲಿದ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಆರಾಧ್ಯ ಮೂರ್ತಿ ಶ್ರೀ ದತ್ತಾಂಜನೇಯ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

