Wednesday, February 12, 2025

ಸರ್ವರ್ ಸಮಸ್ಯೆ: ಪಡಿತರ ಫಲಾನುಭವಿಗಳು ಕಂಗಾಲು

ವಿಟ್ಲ: ನ್ಯಾಯ ಬೆಲೆ ಅಂಗಡಿಗಳಲ್ಲಿ ತಲೆದೋರಿರುವ ಸರ್ವರ್ ಸಮಸ್ಯೆಯಿಂದ ವಿಟ್ಲ ಹೋಬಳಿ ಪ್ರದೇಶದಲ್ಲಿ ಜನರು ರೇಷನ್ ಅಕ್ಕಿಗಾಗಿ ರಾತ್ರಿಯೂ ಕ್ಯೂ ನಿಲ್ಲುವ ಪರಿಸ್ಥಿತಿ ಎದುರಾಗಿದ್ದು, ಈ ಸಮಸ್ಯೆ ಬಗ್ಗೆ ಯಾರ ಉತ್ತರ ಇಲ್ಲದಂತಾಗಿದೆ.
ಕರ್ನಾಟಕ ರಾಜ್ಯಾದಾದ್ಯಂತ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆ ಎದುರಾಗಿದ್ದು, ಬಂಟ್ವಾಳ ತಾಲೂಕು, ವಿಟ್ಲ ಹೋಬಳಿಯಲ್ಲಿ ಮತ್ತಷ್ಟು ಬಿಗಡಾಯಿಸಿದೆ. ಕಳೆದ ಕೆಲವು ತಿಂಗಳ ಹಿಂದೆ ನ್ಯಾಯ ಬೆಲೆ ಅಂಗಡಿಯಲ್ಲಿ ತಿಂಗಳಿನಲ್ಲಿ ಮೂರು ನಾಲ್ಕು ಬಾರಿ ಸರ್ವರ್ ಸಮಸ್ಯೆ ಎದುರಾಗುತ್ತಿತ್ತು. ಆದರೆ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಇಕೆವೈಸಿಯಿಂದಾಗಿ ತಿಂಗಳು ಪೂರ್ತಿ ಸರ್ವರ್ ಸಮಸ್ಯೆ ಎದುರಾಗಿದೆ. ಇದರಿಂದಾಗಿ ಸರ್ಕಾರ ಇಕೆವೈಸಿಯನ್ನು ಮುಂದೂಡಿತ್ತು. ಆದರೆ ಇಕೆವೈಸಿಯಲ್ಲಾದ ಎಡವಟ್ಟಿನಿಂದಾಗಿ ಸರ್ವರ್ ಸಮಸ್ಯೆ ಜನರಿಗೆ ಶಾಪವಾಗಿ ಪರಿಣಾಮಿಸಿದೆ. ವಿಟ್ಲ ಹೋಬಳಿ ಭಾಗದಲ್ಲಿ ಜನರು ರಾತ್ರಿಯೂ ತಮ್ಮ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಅಂಗಡಿ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಸಂಜೆ 7 ಗಂಟೆಯಿಂದ 10 ಗಂಟೆವರೆಗೂ ಕ್ಯೂ ನಿಂತರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...