Wednesday, February 12, 2025

’ಪ್ರತೀ ಸದಸ್ಯರಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಿಕೊಳ್ಳಿ’

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ 18 ಸದಸ್ಯರ ವಾರ್ಡ್‌ಗೆ ಒಂದೇ ರೀತಿಯಾಗಿ ಅನುದಾನ ಹಂಚಿಕೆ ಮಾಡಬೇಕು. ಯಾವುದೇ ವಾರ್ಡ್‌ನಲ್ಲಿ ಕಾಮಗಾರಿ ನಡೆಸುವ ಬಗ್ಗೆ ಸಂಬಂಧಪಟ್ಟ ಸದಸ್ಯರ ಗಮನಕ್ಕೆ ತರಬೇಕು. ತಮಗೆ ಇಷ್ಟಬಂದಂತೆ ಕಾಮಗಾರಿ ನಡೆಸಬಾರದು ಎಂದು ವಿಟ್ಲ ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯರು ಹೇಳಿದರು.
ಶುಕ್ರವಾರ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಸದಸ್ಯರಾದ ರಾಮ್‌ದಾಸ್ ಶೆಣೈ, ರವಿಪ್ರಕಾಶ್, ಶ್ರೀಕೃಷ್ಣ ಅವರು ಇಲ್ಲಿ 18 ಸದಸ್ಯರಿದ್ದಾರೆ. ಆದರೆ ಕೇವಲ 16 ಸದಸ್ಯರಿಗೆ ಮಾತ್ರ 3 ಲಕ್ಷದಂತೆ ಅನುದಾನ ಕಾಯ್ದಿರಿಸಿದ್ದು, ಸರಿಯಲ್ಲ. ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಅಧ್ಯಕ್ಷೆ ದಮಯಂತಿ ಅವರು ಈ ಬಗ್ಗೆ ಸ್ಥಳೀಯ ಸದಸ್ಯೆ ಚಂದ್ರಕಾಂತಿ ಶೆಟ್ಟಿ ಅವರಿಗೆ ಮಾಹಿತಿ ನೀಡಲಾಗಿದೆ ಎಂದಾಗ ಚಂದ್ರಕಾಂತಿ ಅವರು ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ಅಧ್ಯಕ್ಷರಿಗೆ ಪವರ್ ಇಲ್ಲ ಎಂಬ ಹೇಳಿಕೆ ನೀಡುವುದು ಸರಿಯಲ್ಲ. ಆದ್ಯತೆ ಮೇರೆಗೆ ಅನುದಾನ ನೀಡಬೇಕು. ಅಧ್ಯಕ್ಷರಿಗೆ ಸಹಕಾರ ನೀಡಬೇಕು. ದ್ವೇಷದಿಂದ ಅಭಿವೃದ್ಧಿ ಸಾಧ್ಯವಿಲ್ಲ. ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡಬೇಕು ಎಂದರು.

ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ಹಾಲಿ ಶಾಸಕರಿಗೆ ಸರ್ಕಾರದ ಮನೆ ಹಂಚುವ ವೇಳೆ ಬಿಜೆಪಿ ಸದಸ್ಯರು ಒತ್ತಡ ಹಾಕಿ ತಮಗೆ ಬೇಕಾದವರಿಗೆ ಮಾತ್ರ ನೀಡುವ ಮೂಲಕ ರಾಜಕೀಯ ಮಾಡಿದ್ದಾರೆ. ಈ ಸಂದರ್ಭ ಮಧ್ಯೆ ಪ್ರವೇಶಿಸಿದ ಬಿಜೆಪಿ ಸದಸ್ಯರಾದ ರವಿಪ್ರಕಾಶ್ ಹಾಗೂ ಅರುಣ್ ಎಂ ವಿಟ್ಲ ಅವರು ತಮ್ಮ ಅವಧಿಯಲ್ಲಿ ಶಕುಂತಳಾ ಶೆಟ್ಟಿ ಅವರು ತಮ್ಮ ವಾರ್ಡ್‌ಗೆ ಯಾವುದೇ ಅನುದಾನ ನೀಡಿಲ್ಲ. ಹಾಲಿ ಶಾಸಕ ಸಂಜೀವ ಮಠಂದೂರು ಅವರು ಎಲ್ಲಾ ವಾರ್ಡ್‌ಗೆ ಅನುದಾನ ನೀಡಿದ್ದಾರೆ ಯಾವುದೇ ರಾಜಕೀಯ ಮಾಡಿಲ್ಲ ಎಂದರು. ಸದಸ್ಯ ಲೋಕನಾಥ ಶೆಟ್ಟಿ ಕೊಲ್ಯ ಧ್ವನಿಗೂಡಿಸಿದರು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ ಅವರು ಇಲ್ಲಿ ಅಭಿವೃದ್ಧಿ ಮುಖ್ಯ ರಾಜಕೀಯ ಸರಿಯಲ್ಲ. ತಮ್ಮ ವಾರ್ಡ್‌ಗೆ ಬಂದ ಮನೆಯನ್ನು ಇನ್ನೊಂದು ವಾರ್ಡ್‌ಗೆ ಕೊಟ್ಟಿದ್ದೇನೆ. ಆಗ ನಾನು ರಾಜಕೀಯ ಮಾಡಿಲ್ಲ. ಈ ಸಂದರ್ಭ ಎರಡು ಪಕ್ಷದ ನಡುವೆ ಭಾರೀ ವಾದಪ್ರತಿವಾದ ನಡೆಯಿತು. ಇದೇ ವಿಚಾರದಲ್ಲಿ ಒಂದು ಗಂಟೆಗಳ ಕಾಲ ಚರ್ಚೆ ನಡೆಯಿತು. ಕಂದಾಯ ನಿರೀಕ್ಷಕ ಹಾಗೂ ಎಂಜಿನಿಯರ್ ಅವರು ಸಾಮಾನ್ಯ ಸಭೆಗೆ ಗೈರು ಹಾಜರಾದ ಬಗ್ಗೆ ಅಸಮಾಧಾನ ಹಸೈನಾರ್ ನೆಲ್ಲಿಗುಡ್ಡೆ ವ್ಯಕ್ತಪಡಿಸಿದರು. ಬಳಿಕ ವಿವಿಧ ನಿರ್ಣಯಗಳನ್ನು ಅಂಗಿಕರಿಸಲಾಯಿತು.

ಉಪಾಧ್ಯಕ್ಷ ಜಯಂತ ವಿಟ್ಲ, ಮುಖ್ಯಾಧಿಕಾರಿ ಮಾಲಿನಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಸದಸ್ಯರಾದ ಸುನಿತಾ ಕೋಟ್ಯಾನ್, ಸಂಧ್ಯಾ ಮೋಹನ್, ಲತಾ ಅಶೋಕ್ ಪೂಜಾರಿ, ಅಬ್ಬೋಕರೆ ವಿ., ಇಂದಿರಾ ಅಡ್ಯಾಳಿ, ಮಂಜುನಾಥ ಕಲ್ಲಕಟ್ಟ, ಗೀತಾ ಪುರಂದರ, ಸಿಬ್ಬಂದಿಗಳಾದ ಚಂದ್ರಶೇಖರ ವರ್ಮ, ರತ್ನ ಉಪಸ್ಥಿತರಿದ್ದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...