Wednesday, January 28, 2026

ಮದರಂಗಿ ಪತ್ರಿಕೆ: ರಾಜ್ಯ ಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆ ಫಲಿತಾಂಶ

ವಿಟ್ಲ: ಮದರಂಗಿ ಪತ್ರಿಕೆ ಈದ್ ಮೀಲಾದ್ ಪ್ರಯುಕ್ತ ಏರ್ಪಡಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮುನೀರಾ ತೊಕ್ಕೋಟು ಪ್ರಥಮ, ಸಹನಾ ಕಾಂತಬೈಲು ಮಡಿಕೇರಿ ದ್ವಿತೀಯ, ನಿಝಾಂ ಪದ್ಮುಂಜ ತೃತೀಯ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.
ಹಿದಾಯತ್ ಕಂಡ್ಲೂರಿ ಕುಂದಾಪುರ, ಝು.ಮುಮ್ತಾಝ್, ಅತಾವುಲ್ಲಾ ಇಬ್ರಾಹಿಂ ಉದಯವಾಣಿ ಮೈಸೂರು, ರುಕ್ಸಾನಾ ಫಾತಿಮ ಉಪ್ಪಿನಂಗಡಿ, ಮುಹಮ್ಮದ್ ಕಬೀರ್ ಬಕ್ರವಳ್ಳಿ, ಅಮ್ರೀನ ಉಜಿರೆ, ಅಬೂಶಹೀರ್ ಅಬ್ದುಲ್ ರಝಾಖ್ ಮದನಿ ಕಬಕ, ಎನ್.ಎಸ್.ಶರೀಫ್ ಕೈರಂಗಳ ಅವರ ಪ್ರಬಂಧ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿವೆ.
ಕವನ ಸ್ಪರ್ಧೆಯಲ್ಲಿ ಮಿಸ್ರಿಯಾ ಇಸ್ಮತ್ ಫಜೀರ್ ಪ್ರಥಮ, ಎನ್.ವಿಶ್ವನಾಥ್ ನೇರಳಕಟ್ಟೆ ದ್ವಿತೀಯ, ರಮ್ಲತ್ ನಂದರಬೆಟ್ಟು ತೃತೀಯ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.
ಶಾಕಿರ ಉಪ್ಪಿನಂಗಡಿ, ಸಫ ಕಾರ್ಕಳ, ಎನ್.ಕೆ.ಮುಹಮ್ಮದ್ ಹನೀಫ್ ನಂದರಬೆಟ್ಟು, ಮೊಗೇರಿ ಶೇಖರ ದೇವಾಡಿಗ ಭಟ್ರಮನೆ ಬ್ರಹ್ಮಾವರ, ಎಂ.ಕೆ.ಸಿನಾನ್ ಸಖಾಫಿ ಅಜಿಲಮೊಗರು, ರುಕ್ಸಾನಾ ಫಾತಿಮ ಉಪ್ಪಿನಂಗಡಿ, ಜಯಶ್ರೀ ಬೈಲುಪದವು ಪುಣಚ, ರಹ್ಮತ್ ಪುತ್ತೂರು ಯಶ್ವಿತ್, ಅಶೀರುದ್ದೀನ್ ಮಂಜನಾಡಿ, ರಫೀಖ್ ಕಲ್ಕಟ್ಟ, ಗ್ರೀಶ್ಮಾ ಕೆ.ಹೆಚ್.ಕೊಡಿಪ್ಪಾಡಿ ಪುತ್ತೂರು ಅವರ ಕವನ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿವೆ.
ಫೆಬ್ರವರಿ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆಯುವ ಕವಿಗೋಷ್ಠಿ ಮತ್ತು ಮದರಂಗಿ ಪತ್ರಿಕೆ ಪರಿಷ್ಕೃತ ಆವೃತ್ತಿ ಬಿಡುಗಡೆ ಸಮಾರಂಭದಲ್ಲಿ ಬಹುಮಾನ ವಿಜೇತರಿಗೆ ನಗದು ಮತ್ತು ಪ್ರಶಸ್ತಿ ಪತ್ರ ಹಾಗೂ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾದ ಪ್ರಬಂಧ, ಕವನಗಳಿಗೆ ಪ್ರಮಾಣ ಪತ್ರ ಮತ್ತು ಕಿರು ಕಾಣಿಕೆ ನೀಡಿ ಗೌರವಿಸಲಾಗುವುದೆಂದು ಮದರಂಗಿ ಪತ್ರಿಕೆ ಸಂಪಾದಕ ಮಂಡಳಿ ಸದಸ್ಯ ಎ.ಅಬೂಬಕರ್ ಅನಿಲಕಟ್ಟೆ ವಿಟ್ಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...