Wednesday, February 12, 2025

ವಿಟ್ಲ: ಡಾ.ಪ್ರಭಾಕರ ಶಿಶಿಲರ 172ನೇ ಕೃತಿ ಬಿಡುಗಡೆ

ವಿಟ್ಲ: ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಂಘದ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ ಬಿ.ಕಾಂ ಪದವಿ ತರಗತಿಯ ಪಠ್ಯ ವಿಷಯಾಧರಿತ ಡಾ.ಪ್ರಭಾಕರ ಶಿಶಿಲರ ’ಹಣ ಮತ್ತು ಸಾರ್ವಜನಿಕ ಹಣಕಾಸು’ ಕೃತಿಯ ಬಿಡುಗಡೆ ಸಮಾರಂಭ ನೆರವೇರಿತು. ವಿವೇಕಾನಂದ ಕಾಲೇಜು ಪುತ್ತೂರು ಇದರ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ.ಅರುಣ್ ಪ್ರಕಾಶ್ ಕೃತಿಯನ್ನು ಬಿಡುಗಡೆಗೊಳಿಸಿ, ಡಾ.ಪ್ರಭಾಕರ ಶಿಶಿಲರು ಸಾಹಿತ್ಯ ಮತ್ತು ಅರ್ಥಶಾಸ್ತ್ರ ಎರಡೂ ಪ್ರಾಕಾರಗಳಲ್ಲಿ ಆಧಾರ ಕೃತಿ ರಚಿಸುವ ಸವ್ಯಸಾಚಿ. ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ 172 ಕೃತಿಗಳನ್ನು ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದ 43 ಕೃತಿಗಳನ್ನು ತನ್ನ ಪ್ರಾಧ್ಯಾಪಕ ಮತ್ತು ಪ್ರಾಚಾರ್ಯ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ರಚಿಸಿರುವುದು ಶ್ಲಾಘನೀಯ ವಿಚಾರ. ವೃತ್ತಿ ಮತ್ತು ಪ್ರವೃತ್ತಿಗಳನ್ನು ಸಮತೋಲನವಾಗಿ ಸಾಗಿಸಿಕೊಂಡು ಹೋಗುವವರು ಬಹಳ ವಿರಳ. ಇದರಿಂದಾಗಿ ನಮ್ಮ ಜಿಲ್ಲೆಯ ಸಾಹಿತ್ಯ ಮತ್ತು ಅರ್ಥಶಾಸ್ತ್ರ ಕಥೆಗಳು ರಾಜ್ಯಾದ್ಯಂತ ಓದುವಂತಾಗಿದೆ. ಅರ್ಥಶಾಸ್ತ್ರವನ್ನು ಸ್ಥಳೀಯ ಉದಾಹರಣೆಗಳೊಂದಿಗೆ ಎಲ್ಲರಿಗೂ ಅರ್ಥವಾಗುವ ಹಾಗೆ ವಿವರಿಸಿರುವುದು ಇವರ ವಿಶಿಷ್ಟ ಗುಣ ಎಂದರು.
ಕೃತಿಕಾರ ಡಾ.ಪ್ರಭಾಕರ ಶಿಶಿಲ ಮಾತನಾಡಿ, ತನ್ನ ಕೃತಿ ರಚನೆಯ ಪ್ರೇರಣೆಗಳನ್ನು ನೆನಪಿಸಿಕೊಂಡರು. ಜಾಗತೀಕರಣದ ಇಂದಿನ ಯುಗದಲ್ಲೂ ಕನ್ನಡ ಮಾಧ್ಯಮ ತನ್ನ ಆಕರ್ಷಣೆಯನ್ನು ಕಳೆದುಕೊಂಡಿಲ್ಲ. ಆದುದರಿಂದ ಈ ಮಾಧ್ಯಮದಲ್ಲಿ ಒಳ್ಳೆಯ ಅವಲೋಕನ ಕೃತಿಗಳು ಬರಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಿನ್ಸಿಪಾಲ್ ಡಾ.ಶಂಕರ ಪಾಟಾಳಿ ವೈ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರು ಹಾಗೂ ನ್ಯಾಕ್ ಸಂಯೋಜಕರಾದ ಡಾ.ಶ್ರೀಜಾ. ಜೆ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಐ.ಕ್ಯೂ.ಎ.ಸಿ ಸಂಚಾಲಕ ಪರಮೇಶ್ವರಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಚಕ್ರೇಶ್ವರಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪ್ರತೀಕ ಸ್ವಾಗತಿಸಿದರು. ಸಂಧ್ಯಾ ವಂದಿಸಿದರು. ನಫೀಶಾ ಝಲ್ಫ ಡಾ.ಪ್ರಭಾಕರ ಶಿಶಿಲ ಅವರ ವ್ಯಕ್ತಿ ಪರಿಚಯ ಮಾಡಿದರು. ಗಣೇಶ. ಎಂ ಕಾರ್ಯಕ್ರಮ ನಿರೂಪಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...