ವಿಟ್ಲ: ವಿಟ್ಲ ಪಡ್ನೂರು ವ್ಯವಸಾಯ ಸಂಘದ ಅಧ್ಯಕ್ಷರಾಗಿ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಇವರು ಸತತ 3ನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುತ್ತಾರೆ. ಪ್ರಸ್ತುತ ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವರು ಹಲವು ಸಂಘ ಸಂಸ್ಥೆಗಳ ಪದಾಧಿಕರಿಯಾಗಿ ಜನಾನುರಾಗಿಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಬಾಲಕೃಷ್ಣ ರೈ ಮೂರ್ಜೆಬೆಟ್ಟು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅವಧಿಯಲ್ಲಿ ಇವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
