Friday, February 7, 2025

‘ದೇವಾಲಯದ ಮೂಲಕ ಭಗವಂತನ ದರ್ಶನ, ಅನುಗ್ರಹ ಪ್ರಾಪ್ತಿ’ :ಶ್ರೀ ಮಾತಾನಂದಮಯೀ

ವಿಟ್ಲ: ದೇವಾಲಯಗಳು ಆತ್ಮೋನ್ನತಿಗೆ ಪೂರಕವಾಗಿರುತ್ತದೆ. ದೇವಾಲಯದ ಮೂಲಕ ಸರ್ವಂತರ್ಯಾಮಿಯಾದ ಭಗವಂತನ ದರ್ಶನ, ಅನುಗ್ರಹ ಆಗುತ್ತದೆ. ಮನೋಸಂಕಲ್ಪ ದೃಢವಾಗಿದ್ದಾಗ ಯಶಸ್ಸಿನ ಪ್ರತಿಫಲ ಲಭಿಸುತ್ತದೆ. ಮಹತ್ ಸಾಧನೆಯಿದ್ದಾಗ ಮನುಷ್ಯ ಕಂಡ ಕನಸು ನನಸಾಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವೀ ಶ್ರೀ ಮಾತಾನಂದಮಯೀ ಹೇಳಿದರು.
ಅವರು ಬುಧವಾರ ಪೆರುವಾಯಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ನಡೆದ ಮಹಿಳಾ ಸಮಾವೇಶದಲ್ಲಿ ಆಶೀರ್ವಚನ ನೀಡಿದರು. ಪರಿಶುದ್ಧ ಮನಸ್ಸು ಇದ್ದಾಗ ಭಗವಂತನ ಅನುಗ್ರಹ ಲಭಿಸುತ್ತದೆ. ಸಂಪತ್ತಿನ ಜತೆಗೆ ಪಾರಮಾರ್ತಿಕ ಚಿಂತನೆ ಇದ್ದಾಗ ಉತ್ತಮ ವ್ಯಕ್ತಿತ್ವ ನಿರ್‍ಮಾಣವಾಗುತ್ತದೆ. ಮಾತೆ ಸಮಾಜದ ಭದ್ರ ಬುನಾದಿಯಾಗಿದ್ದು, ದೇಶದ ಉನ್ನತಿ ಕುಟುಂಬದಿಂದ ಸಾಧ್ಯವಾಗುತ್ತದೆ. ಸಾತ್ವಿಕತೆಯ ಮೂಲಕ ಕುಟುಂಬ ವ್ಯವಸ್ಥೆಯಲ್ಲಿ ಸಂಸ್ಕಾರವನ್ನು ನೀಡುವ ಕಾರ್‍ಯ ಮಾತೃಶಕ್ತಿಗೆ ಇದೆ. ಮಕ್ಕಳಲ್ಲಿ ಮಮತೆ ಇರಬೇಕು ಹೊರತು ವಾಸ್ತಲ್ಯವಲ್ಲ ಎಂದು ತಿಳಿಸಿದರು.

ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ ಮಹಿಳೆಯರಿಗೆ ಸರಿಯಾದ ಜೀವನ ಹಾದಿ ತೋರಿಸಿದವ ಶ್ರೀಕೃಷ್ಣ. ಶ್ರೀಕೃಷ್ಣನ ಆದರ್ಶಗಳನ್ನು ಮೈಗೂಡಿಸಿಕೊಂಡಾಗ ಸಮಾಜದಲ್ಲಿ ಬದಲಾವಣೆ ಸಾಧ್ಯ. ನಾವು ಬದಲಾಗಿದ್ದೇವೆ ಹೊರತು ಕಾಲ ಬದಲಾಗಿಲ್ಲ. ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂಥ ಕಾರ್‍ಯಕ್ರಮಗಳು ಅಗತ್ಯ. ವಿದ್ಯೆ ಹಾಗೂ ಹುದ್ದೆಗಳು ವ್ಯಕ್ತಿಯನ್ನು ಬದಲಾವಣೆ ಮಾಡುವಂತಾಗಬಾರದು.
ಸವಿತಾ ಅಡ್ವಾಯಿ ಅವರ ಗಾದೆ ಗೊಂಚಲು ಪುಸ್ತಕ ಬಿಡುಗಡೆ ಮಾಡಲಾಯಿತು. ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಆಲಂಗಾರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮೊಕ್ತೇಸರರಾದ ಪದ್ಮಿನಿ ರಾಮಭಟ್ ಆಲಂಗಾರು ವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೈಲಜಾ ಕೆ. ಟಿ. ಭಟ್, ಮಾಣಿಲ ಶ್ರೀ ಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ. ಶೆಟ್ಟಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ, ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮೀರಾ ಆಳ್ವ, ಕೇಪು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಯಶಸ್ವಿನಿ ಭಟ್ ನೆಕ್ಕರೆ, ವಿಶ್ವ ಹಿಂದೂ ಪರಿಷತ್ ಮಾತೃಮಂಡಳಿ ಪೈವಳಿಕೆ ವಲಯ ಖಂಡ ಸಮಿತಿ ಅಧ್ಯಕ್ಷೆ ಕಮಲ ಟೀಚರ್, ಸವಿತಾ ಎಸ್. ಭಟ್ ಅಡ್ವಾಯಿ ಉಪಸ್ಥಿತರಿದ್ದರು.
ಕೃತಿಕಾ ಪ್ರಾರ್ಥಿಸಿದರು. ರೇವತಿ ನಾರಾಯಣ ಕಡೆಂಬಿಲ ಸ್ವಾಗತಿಸಿದರು. ಸೂರ್‍ಯ ಪ್ರಭಾ ಶೆಟ್ಟಿ ಎ.ಕೆ ನಿಲಯ ವಂದಿಸಿದರು. ಮಲ್ಲಿಕಾ ಜಯರಾಮ ರೈ, ಅಶ್ವಿನಿ ಮುಂಚಿರಬೆಟ್ಟು ಕಾರ್‍ಯಕ್ರಮ ನಿರೂಪಿಸಿದರು.



More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...