ವಿಟ್ಲ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರಕಾರಿ ನೌಕರರ ಸಂಘ(ರಿ) ಬೆಂಗಳೂರು ಇವರು ಧಾರವಾಡದಲ್ಲಿ ನಡೆಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಕಲ್ಮಂಜ ಸ.ಹಿ.ಪ್ರಾ.ಶಾಲೆಯ ಪದವೀಧರ ಶಿಕ್ಷಕ ನಾಗರಾಜ ಖಾರ್ವಿ 50 ಮೀ ಬ್ರೆಷ್ಟ್ ಸ್ಟ್ರೋಕ್ ಚಿನ್ನ, 100ಮೀ ಬ್ರೆಷ್ಟ್ ಸ್ಟ್ರೋಕ್ ಚಿನ್ನ, 200ಮೀ ಬ್ರೆಷ್ಟ್ ಸ್ಟ್ರೋಕ್ ಬೆಳ್ಳಿ, 4* 100 ಮೆಡ್ಲೆ ರಿಲೇಯಲ್ಲಿ ಬೆಳ್ಳಿ, 4* 100 ಫ್ರೀ ಸ್ಟೈಲ್ ರಿಲೇ ಬೆಳ್ಳಿ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ರೇಷ್ಮೆ ಇಲಾಖೆಯ ನಿರೀಕ್ಷಕರಾದ ಬಿ.ಕೆ.ನಾಯ್ಕ್, ಶಿವಾನಂದ ಗಟ್ಟಿ, ಲೋಕರಾಜ್ ವಿಟ್ಲ ತರಬೇತಿ ನೀಡಿದ್ದರು.


