Friday, June 27, 2025

ಮನೆ ಮನೆಗೆ ದಿನ ಬಳಕೆ ಸಾಮಗ್ರಿ ವಿತರಣೆ: ಅಳಿಕೆ ಗ್ರಾ.ಪಂ. ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಮುಂದಾಳತ್ವ

ವಿಟ್ಲ: ಕರೊನಾ ವೈರಸ್ ತೀವ್ರತೆಯನ್ನು ಗಮನಿಸಿ ಜನರನ್ನು ಪೇಟೆಗೆ ಹೋಗದಂತೆ ಮಾಡಿ, ಜತೆಗೆ ಯಾವ ಸಂದರ್ಭದಲ್ಲಿಯೂ ಒಂದೇ ಕಡೆ ಗುಂಪು ಸೇರದಂತೆ ಮಾಡಿ ಜನರ ಬಳಿಗೆ ಅಳಿಕೆ ಗ್ರಾಮ ಪಂಚಾಯಿತಿ ವತಿಯಿಂದ ಅಳಿಕೆ ಶ್ರೀಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಸಹಯೋಗದಲ್ಲಿ ದಿನಸಿ ಹಾಗೂ ಅಗತ್ಯವಸ್ತುಗಳನ್ನು ಪೂರೈಕೆ ಮಾಡುವ ಸೇವಾ ಕಾರ್ಯಕ್ಕೆ ಬಹು: ರಾಜ್ಯದಲ್ಲಿ ಮೊದಲ ಬಾರಿಗೆ ಮುಂದಾಗಿದೆ.
ಅಳಿಕೆ ಗ್ರಾಮ ಪಂಚಾಯಿತಿ ಗ್ರಾಮೀಣ ಕಾರ್ಯ ಪಡೆ ಸಭೆಯ ನಿರ್ಣಯದಂತೆ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಗ್ರಾಮದ ಪ್ರತೀ ಮನೆಗಳಿಗೆ ಜೀವನಾವಶ್ಯಕ ಅಗತ್ಯ ವಸ್ತುಗಳಾದ ದಿನಸಿ ಸಾಮಾನು ಮತ್ತು ತರಕಾರಿಗಳನ್ನು ವಾರಕ್ಕೆ ಎರಡು ಬಾರಿ ಸೋಮವಾರ ಹಾಗೂ ಗುರುವಾರ ವಿತರಣೆ ಮಾಡುವ ಕಾರ್ಯಕ್ಕೆ ಮುಂದಾಗುವ ಮೂಲಕ ಅಳಿಕೆ ಎಲ್ಲರಿಗೂ ಮಾದರಿಯಾಗಿದೆ.
ಗ್ರಾಮವನ್ನು 8 ವಿಭಾಗವಾಗಿ ವಿಂಗಡಿಸಿ, ಗ್ರಾಮ ಪಂಚಾಯಿತಿ ಸದಸ್ಯರ ನೇತೃತ್ವದಲ್ಲಿ ಭಜನಾ ಮಂದಿರ, ಸೇವಾ ಸಮಿತಿ, ಮದರಸ ಕಟ್ಟಡ, ಆಸ್ಪತ್ರೆಯ ಕಟ್ಟಡ, ಶಾಲೆಗಳನ್ನು ಬಳಸಿಕೊಂಡು ಈ ಕಾರ್ಯವನ್ನು ಯಶಸ್ವಿ ಮಾಡಲು ಮುಂದಾಗಿದೆ. ಗ್ರಾಮ ಸ್ಥರು ಪೇಟೆಗೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕಾರ್ಯ ಬಹಳಷ್ಟು ಸಹಕಾರಿಯಾಗಲಿದೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...