Tuesday, February 11, 2025

’ಪ್ರೀತಿ, ಭಕ್ತಿ, ಶ್ರದ್ಧೆಯಿಂದ ಮಾಡಿದ ಸತ್ಕರ್ಮ ಮನೆಯನ್ನು ಬೆಳಗುತ್ತದೆ’ -ಮಾಣಿಲ ಶ್ರೀ

ವಿಟ್ಲ: ಪ್ರೀತಿ, ಭಕ್ತಿ, ಶ್ರದ್ಧೆಯಿಂದ ಮಾಡಿದ ಸತ್ಕರ್ಮ ಮನೆಯನ್ನು ಬೆಳಗುತ್ತದೆ. ಸನಾತನ ಹಿಂದೂ ಧರ್ಮ ಒಳ್ಳೆಯದನ್ನೇ ಬಯಸುವಂತದ್ದಾಗಿದೆ. ಹೃದಯ ತುಂಬಿ ಬರುವಂತಹ ಬ್ರಹ್ಮಕಲಶ ಇಲ್ಲಿ ನಡೆದಿದೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಅವರು ಫೆ.12 ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಶಿಬರಿಕಲ್ಲಮಾಡ ಶ್ರೀ ಮಲರಾಯ – ಮೂವರ್ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು.
ಹೊರನಾಡು ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತ ಡಾ. ಭೀಮೇಶ್ವರ ಜೋಷಿ ಮಾತನಾಡಿ ದೇವಸ್ಥಾನಗಳ ಬ್ರಹ್ಮಕಲಶೋತ್ಸವದ ಮೂಲಕ ಧರ್ಮದ ಸಂರಕ್ಷಣೆ ಸಾಧ್ಯವಾಗಿದೆ. ಪ್ರತಿಯೊಬ್ಬನಲ್ಲೂ ಅಂತರಂಗದ ಶುದ್ಧೀಕರಣ ಆಗಬೇಕಾದ ಅವಶ್ಯಕತೆ ಇದೆ. ದೇವಾಲಯದಲ್ಲಿ ಮನ ಪರಿವರ್ತನೆ ಸಹಿತ ಹಲವು ರೀತಿಯ ಬದಲಾವಣೆ ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ಜೇನು ಸಾಕಾಣಿಕೆಯ ಪೂವಪ್ಪ ಪೂಜಾರಿ ಪಿಲಿಂಜ, ಮಾಜಿ ಸೈನಿಕ ಗೋಪಾಲಕೃಷ್ಣ ಭಟ್ ಕಾರ್ಯಾಡಿ, ಕರಾಟೆ ಪಟು ಅನನ್ಯ ನಾಟೆಕಲ್ಲು, ಭೂತಾರಾಧನೆ ಹೊನ್ನಪ್ಪ ನಲಿಕೆ, ಶಿಕ್ಷಣ ಕ್ಷೇತ್ರದ ನಾರಾಯಣ ಪೂಜಾರಿ ಎಸ್. ಕೆ. ಅವರನ್ನು ಸನ್ಮಾನಿಸಲಾಯಿತು. ಮೂಲ್ಕಿ ಸೀಮೆ ಅರಸರಾದ ಯಂ. ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೆ. ಟಿ. ವೆಂಕಟೇಶ್ವರ ಅವರನ್ನು ಗ್ರಾಮಸ್ಥರ ಪರವಾಗಿ ಗೌರವಿಸಲಾಯಿತು.
ಮುಂಬೈಯ ಉದ್ಯಮಿ ಲೋಕನಾಥ ಶೆಟ್ಟಿ ಮರುವಾಳ, ಮಂಗಳೂರು ಮಹಾನಗರಪಾಲಿಕೆಯ ಜಂಟಿ ಆಯುಕ್ತರಾದ ಗೋಕುಲ್ ದಾಸ್ ನಾಯಕ್, ಪುತ್ತೂರು ಮುಳಿಯ ಜುವೆಲ್ಲರ್ಸ್‌ನ ಮುಳಿಯ ಶ್ಯಾಮ್ ಭಟ್, ಮಂಗಳೂರು ಮರಾಠಿ ಸಮಾಜ ಸೇವಾಸಂಘದ ಸ್ಥಾಪಕಾಧ್ಯಕ್ಷರಾದ ಎಂ.ಎ ನಾಯಕ್, ಅಳಿಕೆ ನೆಕ್ಕಿತಪುಣಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ ಸೀತಾರಾಮ, ತುಳು ತುಡರ್ ಕೂಟ ಸುಳ್ಯ ಇದರ ಅಧ್ಯಕ್ಷರಾದ ಜೆ. ಕೆ. ರೈ, ಪ್ರದೀಪ್ ಬಡಕ್ಕಿಲ, ಜೆಡ್ಡು ಶ್ರೀ ಆದಿಧನ್ವಂತರಿ ಕ್ಷೇತ್ರದ ಧರ್ಮದರ್ಶಿ ಗಣಪತಿ ಭಟ್ ಜೆಡ್ಡು, ಮೈಸೂರಿನ ಎಸ್ ಎಲ್ ವಿ ಗ್ರೂಪ್ಸ್‌ನ ಮಾಲಕರಾದ ದಿವಾಕರ ದಾಸ್ ನೇರ್ಲಾಜೆ, ಯೋಗೀಶ್ ಕುಡ್ವ, ಕೆ. ಟಿ. ವೆಂಕಟೇಶ್ವರ ಉಪಸ್ಥಿತರಿದ್ದರು.

ರೇವತಿ ಕೆ. ಸ್ವಾಗತಿಸಿದರು. ನಾಗೇಶ್ ಪಾದೆ ಪ್ರಸ್ತಾವನೆಗೈದರು. ಶ್ರೀಪತಿ ನಾಯಕ್, ಜತ್ತಪ್ಪ ಅಡ್ಯಾಲು, ಚಿದಾನಂದ ಪೆಲತ್ತಿಂಜ ನಾನಾ ಜವಾಬ್ದಾರಿ ನಿರ್ವಹಿಸಿದರು. ಯತೀಶ್ ಕೇದಗೆದಡಿ ವಂದಿಸಿದರು. ಅಶ್ವಿನಿ ಕುಂಡಡ್ಕ ಕಾರ್‍ಯಕ್ರಮ ನಿರೂಪಿಸಿದರು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...