Saturday, June 28, 2025

’ಪ್ರೀತಿ, ಭಕ್ತಿ, ಶ್ರದ್ಧೆಯಿಂದ ಮಾಡಿದ ಸತ್ಕರ್ಮ ಮನೆಯನ್ನು ಬೆಳಗುತ್ತದೆ’ -ಮಾಣಿಲ ಶ್ರೀ

ವಿಟ್ಲ: ಪ್ರೀತಿ, ಭಕ್ತಿ, ಶ್ರದ್ಧೆಯಿಂದ ಮಾಡಿದ ಸತ್ಕರ್ಮ ಮನೆಯನ್ನು ಬೆಳಗುತ್ತದೆ. ಸನಾತನ ಹಿಂದೂ ಧರ್ಮ ಒಳ್ಳೆಯದನ್ನೇ ಬಯಸುವಂತದ್ದಾಗಿದೆ. ಹೃದಯ ತುಂಬಿ ಬರುವಂತಹ ಬ್ರಹ್ಮಕಲಶ ಇಲ್ಲಿ ನಡೆದಿದೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಅವರು ಫೆ.12 ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಶಿಬರಿಕಲ್ಲಮಾಡ ಶ್ರೀ ಮಲರಾಯ – ಮೂವರ್ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು.
ಹೊರನಾಡು ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತ ಡಾ. ಭೀಮೇಶ್ವರ ಜೋಷಿ ಮಾತನಾಡಿ ದೇವಸ್ಥಾನಗಳ ಬ್ರಹ್ಮಕಲಶೋತ್ಸವದ ಮೂಲಕ ಧರ್ಮದ ಸಂರಕ್ಷಣೆ ಸಾಧ್ಯವಾಗಿದೆ. ಪ್ರತಿಯೊಬ್ಬನಲ್ಲೂ ಅಂತರಂಗದ ಶುದ್ಧೀಕರಣ ಆಗಬೇಕಾದ ಅವಶ್ಯಕತೆ ಇದೆ. ದೇವಾಲಯದಲ್ಲಿ ಮನ ಪರಿವರ್ತನೆ ಸಹಿತ ಹಲವು ರೀತಿಯ ಬದಲಾವಣೆ ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ಜೇನು ಸಾಕಾಣಿಕೆಯ ಪೂವಪ್ಪ ಪೂಜಾರಿ ಪಿಲಿಂಜ, ಮಾಜಿ ಸೈನಿಕ ಗೋಪಾಲಕೃಷ್ಣ ಭಟ್ ಕಾರ್ಯಾಡಿ, ಕರಾಟೆ ಪಟು ಅನನ್ಯ ನಾಟೆಕಲ್ಲು, ಭೂತಾರಾಧನೆ ಹೊನ್ನಪ್ಪ ನಲಿಕೆ, ಶಿಕ್ಷಣ ಕ್ಷೇತ್ರದ ನಾರಾಯಣ ಪೂಜಾರಿ ಎಸ್. ಕೆ. ಅವರನ್ನು ಸನ್ಮಾನಿಸಲಾಯಿತು. ಮೂಲ್ಕಿ ಸೀಮೆ ಅರಸರಾದ ಯಂ. ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೆ. ಟಿ. ವೆಂಕಟೇಶ್ವರ ಅವರನ್ನು ಗ್ರಾಮಸ್ಥರ ಪರವಾಗಿ ಗೌರವಿಸಲಾಯಿತು.
ಮುಂಬೈಯ ಉದ್ಯಮಿ ಲೋಕನಾಥ ಶೆಟ್ಟಿ ಮರುವಾಳ, ಮಂಗಳೂರು ಮಹಾನಗರಪಾಲಿಕೆಯ ಜಂಟಿ ಆಯುಕ್ತರಾದ ಗೋಕುಲ್ ದಾಸ್ ನಾಯಕ್, ಪುತ್ತೂರು ಮುಳಿಯ ಜುವೆಲ್ಲರ್ಸ್‌ನ ಮುಳಿಯ ಶ್ಯಾಮ್ ಭಟ್, ಮಂಗಳೂರು ಮರಾಠಿ ಸಮಾಜ ಸೇವಾಸಂಘದ ಸ್ಥಾಪಕಾಧ್ಯಕ್ಷರಾದ ಎಂ.ಎ ನಾಯಕ್, ಅಳಿಕೆ ನೆಕ್ಕಿತಪುಣಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ ಸೀತಾರಾಮ, ತುಳು ತುಡರ್ ಕೂಟ ಸುಳ್ಯ ಇದರ ಅಧ್ಯಕ್ಷರಾದ ಜೆ. ಕೆ. ರೈ, ಪ್ರದೀಪ್ ಬಡಕ್ಕಿಲ, ಜೆಡ್ಡು ಶ್ರೀ ಆದಿಧನ್ವಂತರಿ ಕ್ಷೇತ್ರದ ಧರ್ಮದರ್ಶಿ ಗಣಪತಿ ಭಟ್ ಜೆಡ್ಡು, ಮೈಸೂರಿನ ಎಸ್ ಎಲ್ ವಿ ಗ್ರೂಪ್ಸ್‌ನ ಮಾಲಕರಾದ ದಿವಾಕರ ದಾಸ್ ನೇರ್ಲಾಜೆ, ಯೋಗೀಶ್ ಕುಡ್ವ, ಕೆ. ಟಿ. ವೆಂಕಟೇಶ್ವರ ಉಪಸ್ಥಿತರಿದ್ದರು.

ರೇವತಿ ಕೆ. ಸ್ವಾಗತಿಸಿದರು. ನಾಗೇಶ್ ಪಾದೆ ಪ್ರಸ್ತಾವನೆಗೈದರು. ಶ್ರೀಪತಿ ನಾಯಕ್, ಜತ್ತಪ್ಪ ಅಡ್ಯಾಲು, ಚಿದಾನಂದ ಪೆಲತ್ತಿಂಜ ನಾನಾ ಜವಾಬ್ದಾರಿ ನಿರ್ವಹಿಸಿದರು. ಯತೀಶ್ ಕೇದಗೆದಡಿ ವಂದಿಸಿದರು. ಅಶ್ವಿನಿ ಕುಂಡಡ್ಕ ಕಾರ್‍ಯಕ್ರಮ ನಿರೂಪಿಸಿದರು.

More from the blog

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...