Saturday, July 12, 2025

ಹಣಕ್ಕಾಗಿ ಬೆದರಿಕೆ: ಆರೋಪಿಯ ವಿರುದ್ಧ ದೂರು ದಾಖಲು

ಬಂಟ್ವಾಳ: ಹಿರಿಯನಾಗರಿಕರೊಬ್ಬರಿಗೆ ಮಹಿಳೆಯ ಜೊತೆ ಸಂಪರ್ಕ ಕಲ್ಪಿಸಿ ಹಣ ವಸೂಲಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯೋರ್ವನ ವಿರುದ್ದ ಶನಿವಾರ ವಿಟ್ಲ ಠಾಣೆಯಲ್ಲಿ ದೂರುದಾಖಲಾಗಿದೆ.

ವಿಟ್ಲ ಕಸ್ಬಾ ಗ್ರಾಮ ನಿವಾಸಿಯಾಗಿರುವ ಹಿರಿಯನಾಗರಿಕರೊಬ್ಬರು ಬಾಡಿಗೆಗೆ ನೀಡಿರುವ ಮನೆಯಲ್ಲಿ ಓರ್ವ ಮಹಿಳೆ ಮತ್ತು ಮಗು ವಾಸವಾಗಿದ್ದರು. ಆರೋಪಿ ಉಮ್ಮರ್ ಎಂಬಾತನು ಮಾ.3 ರಂದು ಇಬ್ಬರ ನಡುವೆ ಸಂಪರ್ಕ ಕಲ್ಪಿಸಿ, ಬೆದರಿಕೆ ಒಡ್ಡಿ 50 ಸಾವಿರ ಹಣವನ್ನು ವಸೂಲುಮಾಡಿದ್ದ. ಆ ಬಳಿಕವೂ ಬೇರೆ ನಂಬರ್ ನಿಂದ ಕರೆ ಮಾಡಿ, ಪೊಲೀಸ್ ಮಾತನಾಡುವುದೆಂದು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಮೇ.1 ರಂದು ಮನೆಗೆ ಬಂದು ಹಣಕ್ಕಾಗಿ ಬೆದರಿಕೆ ಒಡ್ಡಿದ್ದು,ನೆರೆಮನೆಯವರನ್ನು ಕಂಡು ಪರಾರಿಯಾಗಿದ್ದಾನೆ. ಹಿರಿಯ ನಾಗರಿಕ ಇದೀಗ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...