Friday, June 27, 2025

ವಿದ್ಯುತ್ ಮಾಪಕ ಓದುಗರಿಗೆ ಸಿಗದ ವೇತನ: ಕೆಲಸ ಸ್ಥಗಿತಗೊಳಿಸಿದ ಸಿಬ್ಬಂದಿಗಳು

ವಿಟ್ಲ: ಬಂಟ್ವಾಳ ಮೆಸ್ಕಾಂ ವಿಭಾಗಕ್ಕೆ ಸಂಬಂಧಪಟ್ಟಂತೆ ಸುಮಾರು 120 ಮಂದಿ ಗುತ್ತಿಗೆ ವಿದ್ಯುತ್ ಮಾಪಕ ಓದುಗರಿಗೆ ಮಾಪಕ ಓದುವಿಕೆಯ ಗುತ್ತಿಗೆ ಪಡೆದುಕೊಂಡ ಗುತ್ತಿಗೆದಾರರು ಏಪ್ರಿಲ್ ತಿಂಗಳ ವೇತನವನ್ನು ಮೀಟರ್ ರೀಡರ್‍ಗಳಿಗೆ ನೀಡದ ಕಾರಣ ಮೀಟರ್ ರೀಡಿಂಗ್ ಅನ್ನು ಸ್ಥಗಿತಗೊಳಿಸಿದ್ದಾರೆ.
ಕಳೆದ ಏಪ್ರಿಲ್ ತಿಂಗಳಿನಲ್ಲಿ ಲಾಕ್ ಡೌನ್ ಇದ್ದುದರಿಂದ ನಮಗೆ ಸ್ಥಳಕ್ಕೆ ಮೀಟರ್ ರೀಡಿಂಗ್ ಮಾಡಲು ಅಸಾಧ್ಯವಾಗಿದ್ದು, ಈ ಬಗ್ಗೆ ಸರ್ಕಾರದ ಆದೇಶದಂತೆ ಲಾಕ್‍ಡೌನ್ ಇರುವ ಸಂದರ್ಭದಲ್ಲಿ(ಏಪ್ರಿಲ್‍ನಲ್ಲಿ) ಗುತ್ತಿಗೆ ನೌಕರರು ಕೆಲಸ ಮಾಡಲು ಕೆಲಸ ಮಾಡಲು ಅಸಾಧ್ಯವಾದರೂ ಗುತ್ತಿಗೆದಾರರು ಮೀಟರ್ ರೀಡರ್‍ಗಳು ಕರ್ತವ್ಯದಲ್ಲಿದ್ದಾರೆಂದು ಪರಿಗಣಿಸಿ ಸರಕಾರದದ ಆದೇಶದಂತೆ ಅವರಿಗೆ ವೇತನ ನೀಡುವಂತೆ ಸರಕಾರದ ಸುತ್ತೋಳೆಯಲ್ಲಿ ತಿಳಿಸಲಾಗಿದೆ.
ಆದರೆ ನಮಗೆ ಮೇ ತಿಂಗಳಿನಲ್ಲಿ ರೀಡಿಂಗ್ ಮಾಡಲು ಏಪ್ರಿಲ್ ತಿಂಗಳ ವೇತನ ನೀಡದೇ ಇರುವುದರಿಂದ ಲಾಕ್‍ಡೌನ್‍ನ ಈ ಸಂದರ್ಭದಲ್ಲಿ ಕೈಯಲ್ಲಿ ಹಣ ಇಲ್ಲದೇ ಮತ್ತು ಬಸ್ಸಿನ ವ್ಯವಸ್ಥೆ ಕೂಡಾ ಇಲ್ಲದೇ ದುಬಾರಿ ಹಣ ಕೊಟ್ಟು ಕರ್ತವ್ಯಕ್ಕೆ ಹಾಜರಾಗಬೇಕಾಗುವ ಅನಿವಾರ್ಯತೆ ಇದೆ. ಆದರೂ ನಾವು ಏಪ್ರಿಲ್ ತಿಂಗಳ ವೇತನವನ್ನು ನೀಡುತ್ತಾರೆಂಬ ಭರವಸೆಯಿಂದ ನಾವು ಏಪ್ರಿಲ್ ತಿಂಗಳ ಮಾಪಕ ಓದುವಿಕೆಯ ಕೆಲಸವನ್ನು ಮಾಡಿರುತ್ತೇವೆ. ಆದರೆ ಈಗ ನಮ್ಮ ಏಜನ್ಸಿಯ ಮುಖ್ಯಸ್ಥರು ಏಪ್ರಿಲ್ ತಿಂಗಳ ವೇತನ ಕೊಡಲು ಸಾಧ್ಯವುಲ್ಲ ಎಂದು ಹೇಳಿದ್ದಾರೆ, ಕಳೆದ ತಿಂಗಳ ವೇತನ ಸಿಕ್ಕಿದ ಬಳಿಕವೇ ನಾವು ಮೀಟರ್ ರೀಡರ್ ಮಾಡುವುದಾಗಿ ತೀರ್ಮಾನಿಸಿದ್ದೇವೆ ಎಂದು ಬಂಟ್ವಾಳ ಮೆಸ್ಕಾಂ ವಿಭಾಗದ ಮಾಪಕ ಓದುಗಾರರು ತಿಳಿಸಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...