Tuesday, February 11, 2025

“ಮಕ್ಕಳ ಲೋಕ”ದ ಅಧ್ಯಕ್ಷರಾಗಿ ವಿಠಲ ಶೆಟ್ಟಿ ಕೆ.

ವಿಟ್ಲ: ಮಕ್ಕಳ ಲೋಕ ಕ.ಸಾ.ಪ ಬಂಟ್ವಾಳ ತಾಲೂಕು ಘಟಕದ ನೂತನ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಶಿಕ್ಷಣ ತಜ್ಞ ವಿಟ್ಲದ ಕೆ. ವಿಠಲ ಶೆಟ್ಟಿ ಆಯ್ಕೆಯಾಗಿರುವರು.
ಉಪಾಧ್ಯಕ್ಷೆಯಾಗಿ ವಿಲ್ಮ ಸೀಕ್ವೇರಾ, ಕೋಶಾಧಿಕಾರಿಯಾಗಿ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಮೇಶ ಎಂ. ಬಾಯಾರು, ಕಾರ್ಯದಶಿಯಾಗಿ ಶಿವರಾಮ ಭಟ್ ನೆಡ್ಲೆ, ಜೊತೆ ಕಾರ್ಯದರ್ಶಿಯಾಗಿ ಗಂಗಮ್ಮ ಪಿ. ಮಣಿಲ ಆಯ್ಕೆಯಾಗಿರುವರು. ಸದಸ್ಯರಾಗಿ ವಿಶ್ವನಾಥ ಗೌಡ ಕುಳಾಲು, ರಾಜಾರಾಮ ವರ್ಮ ವಿಟ್ಲ, ಸೀತಾಲಕ್ಷ್ಮೀ ವಿಟ್ಲ, ಸುರೇಖಾ ಯಳವಾರ, ಮಾಲತಿ ಕಾನತಡ್ಕ, ಈಶ್ವರ ಪ್ರಸಾದ ನೀರ್ಪಾಜೆ, ಗೋಪಾಲಕೃಷ್ಣ ಅನಂತಾಡಿ ಆಯ್ಕೆಯಾಗಿರುವರು.
ಕ.ಸಾ.ಪ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಮೋಹನರಾವ್ ಕೊಯಿಲ, ಹಿಂದಿನ ಅಧ್ಯಕ್ಷರುಗಳಾದ ಉದಯಶಂಕರ ನೀರ್ಪಾಜೆ, ಜಯಾನಂದ ಪೆರಾಜೆ, ವಿ.ಮ.ಭಟ್, ಅನಂತಕೃಷ್ಣ ಹೆಬ್ಬಾರ್, ವಿಟ್ಲ, ಮಹಾಬಲ ಭಟ್ ನೆಗಲಗುಳಿ, ಭಾಸಕರ ಅಡ್ವಳ ಗೌರವ ಸಲಹೆಗಾರರಾಗಿ ಮುಂದುವರಿಯಲಿರುವರು.
ಹದಿನೈದನೇ ವರ್ಷದ ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನವು ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಇದಲ್ಲದೆ ಅಪೇಕ್ಷಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಿಂದಿನಂತೆಯೇ ಸಾಹಿತ್ಯ ರಚನೆ ಪ್ರೇರಣಾ ಕಮ್ಮಟಗಳನ್ನು ಉಚಿತವಾಗಿ ನಿರ್ವಹಿಸಲಾಗುತ್ತದೆ. ಇದಕ್ಕಾಗಿ 9480368457ನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವರು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...