Friday, January 30, 2026

ಸಂಕಷ್ಟ ಸಮಯದಲ್ಲಿಯೇ ತೆರಿಗೆ ಹೊರೆ: ವಿಟ್ಲ ಪ.ಪಂ. ಆಡಳಿತ ವಿರುದ್ಧ ಅಸಮಾಧಾನ

ವಿಟ್ಲ: ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತೆರಿಗೆ ಏರಿಕೆಗೆ ಸದಸ್ಯರಿಂದ ವಿರೋಧ ವ್ಯಕ್ತವಾದರೂ, ಕರೊನಾ ಸಂಕಷ್ಟದಲ್ಲಿರುವ ಜನರಿಗೆ ತೆರಿಗೆ ಹೆಚ್ಚಳದ ಕೊಡುಗೆಯನ್ನು ಪಟ್ಟಣ ಪಂಚಾಯಿತಿ ನೀಡಿದೆ. ಮನೆಗಳಿಗೆ ಶೇ.೧೫, ಅಂಗಡಿಗಳಿಗೆ ಶೇ.18ರಂತೆ ಏರಿಕೆಯಾಗಿದ್ದು, ಸದಸ್ಯರು ತೋರಿಕೆಗೆ ವಿರೋಧ ವ್ಯಕ್ತ ಪಡಿಸಿದ್ದಾರೆಯೇ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಪ್ರಶ್ನಿಸಿದ್ದಾರೆ.

ಸರಕಾರದ ಮೀಸಲಾತಿಯ ಕಾರಣದಿಂದ ಅಧಿಕಾರದಲ್ಲಿ ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷರಾಗಿದ್ದಾರೆ. ಬಹುಮತದ ನಿರ್ಣಯಗಳ ಮೇಲೆ ಎಲ್ಲಾ ವಿಚಾರಗಳು ಜಾರಿಗೆ ಬರುತ್ತದೆ. ಜನರು ಹಣವಿಲ್ಲದೇ ಸಂಕಷ್ಟದಲ್ಲಿರುವ ಸಮಯದಲ್ಲಿ ತೆರಿಗೆ ವಿನಾಯಿತಿ ಮಾಡಬೇಕು. ಕಟ್ಟಡ ಪರವಾನಿಗೆ ಪಡೆಯಲು ಅಗತ್ಯವಿರುವ ವಿಟ್ಲ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲು ಶಾಸಕರು ಪ್ರಯತ್ನ ಮಾಡಬೇಕು ಎಂದು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಆಗ್ರಹಿಸಿದರು.

ಕಸ ವಿಲೇವಾರಿಯಲ್ಲಿ ಮಾದರಿ ಎಂದು ಪ್ರಶಸ್ತಿ ಪಡೆದ ವಿಟ್ಲದಲ್ಲಿ ಇಂದು ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಪೇಟೆಯಲ್ಲಿ ಗುಡ್ಡೆ ಬೀಳಲು ಆರಂಭವಾಗುತ್ತಿದೆ. ಪ್ರತಿ 700 ಮಂದಿಗೆ ಓರ್ವ ಸಿಬ್ಬಂದಿಯ ನೇಮಕ ನಡೆದರೆ ಈ ಸಮಸ್ಯೆಯನ್ನು ಬಗೆ ಹರಿಸಬಹುದಾಗಿದೆ. ಆದರೆ ಸದ್ಯ ಕಸ ವಿಲೇವಾರಿಗೆ ನೇಮಕವಾದ ಸಿಬ್ಬಂದಿಗಳಿಂದ ಪಂಚಾಯಿತಿ ಕಚೇರಿಯಲ್ಲಿ ಕೆಲಸ ಮಾಡಿಸಲಾಗುತ್ತಿದೆ. ಇದನ್ನು ಜಿಲ್ಲಾಡಳಿತ ಸರಿಯಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ ಎಂದರು.

ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ವಿ. ಕೆ. ಎಂ. ಅಶ್ರಫ್, ಉಪಾಧ್ಯಕ್ಷ ಅಶೋಕ್ ಕುಮಾರ್ ಎನ್. ಎಸ್. ಡಿ., ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಬ್ದುಲ್ ರಹಿಮಾನ್ ಕುರುಂಬಳ ಮತ್ತಿತರರು ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...