Tuesday, January 27, 2026

ಇಡ್ಕಿದು: ಆತ್ಮ ನಿರ್ಭರ್ ಭಾರತ್ ಸ್ವ ಉದ್ಯೋಗ ಮಾಹಿತಿ ಶಿಬಿರ

ವಿಟ್ಲ: ಇಡ್ಕಿದು ಗ್ರಾ.ಪಂ ವ್ಯಾಪ್ತಿಯ ಇಡ್ಕಿದು ಸಹಕಾರಿ ಪಂಚಾಮೃತದ ಅಡ್ಯಾಲು ಕರೆ ಶಾಖೆ ಕಬಕದಲ್ಲಿ ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ವತಿಯಿಂದ ಭಾರತ ಸರಕಾರದ ಆತ್ಮ ನಿರ್ಭರ್ ಭಾರತ್ ಸ್ವ ಉದ್ಯೋಗ ಮಾಹಿತಿ ಶಿಬಿರ ಹಾಗೂ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೇಂದ್ರ ಸರಕಾರದ ಹಲವು ಜನಪರ ಯೋಜನೆಗಳಲ್ಲಿ ಆತ್ಮ ನಿರ್ಭರ್ ಭಾರತ್ ಯೋಜನೆಯು ಒಂದಾಗಿದ್ದು, ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜೀವನ ನಡೆಸುತ್ತಿರುವವರ ಬಾಳು ಹಸನಾಗಬೇಕು ಮತ್ತು ಸ್ವ ಉದ್ಯೋಗ ಮಾಡಿಕೊಂಡು ನೆಮ್ಮದಿಯ ಬದುಕು ಸಾಗಿಸಲು ಪೂರಕವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಎಲ್ಲಾ ಯೋಜನೆಗಳನ್ನು ಕಟ್ಟ ಕಡೆಯ ಜನಸಾಮಾನ್ಯನಿಗೂ ಮುಟ್ಟುವಂತೆ ಕಾರ್ಯೋನ್ಮುಖವಾಗಬೇಕು ಎಂದರು.
ಸಮಾರಂಭದಲ್ಲಿ ಪುತ್ತೂರು ಬಿ.ಜೆ.ಪಿ ಗ್ರಾಮಾಂತರ ಮಂಡಲದ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾದ ಉಷಾಚಂದ್ರ, ಪ್ರ.ಕಾರ್ಯದರ್ಶಿ ದಯಾನಂದ ಶೆಟ್ಟಿ, ಪುಣಚ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್ ಯಾದವ್, ಕಬಕ ತಾಲೂಕು ಪಂಚಾಯಿತಿ ಸದಸ್ಯರಾದ ದಿವ್ಯ ಪುರುಷೋತ್ತಮ, ಬಿ.ಜೆ.ಪಿ ಮಂಡಲದ ಕೋಶಾಧಿಕಾರಿ ರಮೇಶ್ ಭಟ್.ಎಂ.ಎಚ್ ಉಪಸ್ಥಿತರಿದ್ದರು.
ಈ ಕಾರ್ಯಾಗಾರದ ಮಾಹಿತಿ ಶಿಬಿರದಲ್ಲಿ ಸ್ವ ಉದ್ಯೋಗಗಳ ಬಗ್ಗೆ ಪುತ್ತೂರು ವಿವೇಕಾನಂದ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಮಾಹಿತಿ ನೀಡಿದರು. ಸಾಲ ಸೌಲಭ್ಯಗಳ ಮಾಹಿತಿಯನ್ನು ಪುತ್ತೂರು ಅಮೂಲ್ಯ ಆರ್ಥಿಕ ಸಾಕ್ಷರತೆ ಕೇಂದ್ರ ಸೀನಿಯರ್ ಕೌನ್ಸಿಲರ್ ಗೋಪಾಲಕೃಷ್ಣ ಭಟ್ ನೀಡಿದರು.
ಈ ಕಾರ್ಯಗಾರದಲ್ಲಿ ವಿವಿಧ ಶಕ್ತಿಕೇಂದ್ರಗಳ ಪ್ರಮುಖರು ಮತ್ತು ಮಹಿಳಾ ಪ್ರತಿನಿಧಿಗಳು ಭಾಗವಹಿಸಿದ್ದರು. ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ ಸ್ವಾಗತಿಸಿದರು. ಕುಮಾರಿ ವಿಶಂತಿ ಶೆಟ್ಟಿ ಉರಿಮಜಲು ಪ್ರಾರ್ಥಿಸಿದರು. ಇಡ್ಕಿದು ತಾಲೂಕು ಪಂಚಾಯತ್ ಸದಸ್ಯೆ ವನಜಾಕ್ಷಿ ಎಸ್.ಭಟ್ ವಂದಿಸಿದರು. ಇಡ್ಕಿದು ಶಕ್ತಿ ಕೇಂದ್ರದ ಸಂಚಾಲಕರಾದ ಯಂ. ಸುಧೀರ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...