Friday, July 11, 2025

’ವಿಶ್ವ ಧರ್ಮ ಮಂದಿರ’ – ಇಂಡಿಯಾ ಆನ್ ದ ಮೂವ್’ ಅಭಿಯಾನದ ಗೌರವಕ್ಕೆ ಜಯರಾಮ ರೈ ಕಾಟುಕುಕ್ಕೆ ಆಯ್ಕೆ

ವಿಟ್ಲ: ’ವಿಶ್ವ ಧರ್ಮ ಮಂದಿರ’ – ಇಂಡಿಯಾ ಆನ್ ದ ಮೂವ್’ ಅಭಿಯಾನದ ಗೌರವಕ್ಕೆ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಿನ್ಸಿಪಾಲ್ ಜಯರಾಮ ರೈ ಕಾಟುಕುಕ್ಕೆ ಆಯ್ಕೆಯಾಗಿದ್ದಾರೆ.
ಕಳೆದ 18 ವರ್ಷಗಳಿಂದ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು 2008ರಿಂದ ಪ್ರಿನ್ಸಿಪಾಲರಾಗಿ ಭಡ್ತಿಗೊಂಡು, ಸಂಸ್ಥೆಯನ್ನು ದ.ಕ. ಜಿಲ್ಲೆಯಲ್ಲಿ ಅಗ್ರಸ್ಥಾಕ್ಕೆ ಏರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್‌ಕೆಜಿ ಯಿಂದ 10ನೇ ತರಗತಿವರೆಗೆ 1230 ಮಂದಿ ವಿದ್ಯಾರ್ಥಿಗಳು ಹಾಗೂ 60 ಮಂದಿ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿವರ್ಗವನ್ನು ಹೊಂದಿರುವ ಜೇಸಿ ಆಂಗ್ಲಮಾಧ್ಯಮ ಸಂಸ್ಥೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ 15 ವರ್ಷಗಳಿಂದ ಶೇಕಡಾ 100 ಫಲಿತಾಂಶವನ್ನು ದಾಖಲಿಸಿದ್ದು, ಕಳೆದ ಸಾಲಿನಲ್ಲಿ ಫಲಿತಾಂಶದ ಗುಣಮಟ್ಟ ಸೂಚ್ಯಂಕದಲ್ಲಿ ಜಿಲ್ಲೆಯ 413 ಪ್ರೌಢಶಾಲೆಗಳಲ್ಲಿ 5ನೇ ಸ್ಥಾನವನ್ನು, ರಾಜ್ಯದ 10,877 ಶಾಲೆಗಳ ಪೈಕಿ 129ನೇ ಸ್ಥಾನವನ್ನು ಪಡೆದಿದೆ. ಈ ಸಂಸ್ಥೆಯ ಪ್ರಿನ್ಸಿಪಾಲ್ ಜವಾಬ್ದಾರಿಯೊಂದಿಗೆ ಗಣಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉತ್ತಮ ವಾಗ್ಮಿ, ಹವ್ಯಾಸಿ ಯಕ್ಷಗಾನ ಕಲಾವಿದರಾಗಿ, ತಾಳಮದ್ದಳೆ ಅರ್ಥದಾರಿಯಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು ಸಂಗೀತದಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ. ವಿದ್ಯಾರ್ಥಿಗಳನ್ನು ಸಮರ್ಪಕವಾಗಿ ಬೆಳೆಸುವಲ್ಲಿ ಪ್ರೇರಕರಾಗಿದ್ದಾರೆ.
ಶಿಕ್ಷಣದಲ್ಲಿ ಭಾರತೀಯ ವಿಚಾರಧಾರೆಗಳನ್ನು ಅಳವಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು, ಉತ್ತಮ ಗುಣನಡತೆ ಹಾಗೂ ದೇಶಪ್ರೇಮವನ್ನು ಬೆಳೆಸುವಲ್ಲಿ ಅವರು ತೋರಿದ ಆಸಕ್ತಿ ಹಾಗೂ ಈ ನಿಟ್ಟಿನಲ್ಲಿ, ಅವರ ಪ್ರಯತ್ನವನ್ನು ಪರಿಗಣಿಸಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸ್ಥಾಪಕ ಚೇರ್‌ಮೇನ್ ಪೂಜ್ಯ ಆಚಾರ್‍ಯ ಅಜಿತ್ ಕುಮಾರ್ ತಿಳಿಸಿದ್ದಾರೆ. ಎಪ್ರಿಲ್ 7 ರಂದು ಬೆಂಗಳೂರಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯುವ, ವಿಶ್ವಧರ್ಮಮಂದಿರ ಅಭಿಯಾನದ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಈ ಗೌರವ ಪ್ರದಾನ ಮಾಡಲಾಗಲಿದೆ. ಕಾರ್‍ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸುವ ವಿಜ್ಞಾನಿ ಪದ್ಮಶ್ರೀ ಡಾ. ಪ್ರಹ್ಲಾದ್ ರಾಮರಾವ್ ಗೌರವ ಪ್ರದಾನ ಮಾಡಲಿದ್ದಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...