Tuesday, February 11, 2025

’ವಿಶ್ವ ಧರ್ಮ ಮಂದಿರ’ – ಇಂಡಿಯಾ ಆನ್ ದ ಮೂವ್’ ಅಭಿಯಾನದ ಗೌರವಕ್ಕೆ ಜಯರಾಮ ರೈ ಕಾಟುಕುಕ್ಕೆ ಆಯ್ಕೆ

ವಿಟ್ಲ: ’ವಿಶ್ವ ಧರ್ಮ ಮಂದಿರ’ – ಇಂಡಿಯಾ ಆನ್ ದ ಮೂವ್’ ಅಭಿಯಾನದ ಗೌರವಕ್ಕೆ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಿನ್ಸಿಪಾಲ್ ಜಯರಾಮ ರೈ ಕಾಟುಕುಕ್ಕೆ ಆಯ್ಕೆಯಾಗಿದ್ದಾರೆ.
ಕಳೆದ 18 ವರ್ಷಗಳಿಂದ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು 2008ರಿಂದ ಪ್ರಿನ್ಸಿಪಾಲರಾಗಿ ಭಡ್ತಿಗೊಂಡು, ಸಂಸ್ಥೆಯನ್ನು ದ.ಕ. ಜಿಲ್ಲೆಯಲ್ಲಿ ಅಗ್ರಸ್ಥಾಕ್ಕೆ ಏರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್‌ಕೆಜಿ ಯಿಂದ 10ನೇ ತರಗತಿವರೆಗೆ 1230 ಮಂದಿ ವಿದ್ಯಾರ್ಥಿಗಳು ಹಾಗೂ 60 ಮಂದಿ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿವರ್ಗವನ್ನು ಹೊಂದಿರುವ ಜೇಸಿ ಆಂಗ್ಲಮಾಧ್ಯಮ ಸಂಸ್ಥೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ 15 ವರ್ಷಗಳಿಂದ ಶೇಕಡಾ 100 ಫಲಿತಾಂಶವನ್ನು ದಾಖಲಿಸಿದ್ದು, ಕಳೆದ ಸಾಲಿನಲ್ಲಿ ಫಲಿತಾಂಶದ ಗುಣಮಟ್ಟ ಸೂಚ್ಯಂಕದಲ್ಲಿ ಜಿಲ್ಲೆಯ 413 ಪ್ರೌಢಶಾಲೆಗಳಲ್ಲಿ 5ನೇ ಸ್ಥಾನವನ್ನು, ರಾಜ್ಯದ 10,877 ಶಾಲೆಗಳ ಪೈಕಿ 129ನೇ ಸ್ಥಾನವನ್ನು ಪಡೆದಿದೆ. ಈ ಸಂಸ್ಥೆಯ ಪ್ರಿನ್ಸಿಪಾಲ್ ಜವಾಬ್ದಾರಿಯೊಂದಿಗೆ ಗಣಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉತ್ತಮ ವಾಗ್ಮಿ, ಹವ್ಯಾಸಿ ಯಕ್ಷಗಾನ ಕಲಾವಿದರಾಗಿ, ತಾಳಮದ್ದಳೆ ಅರ್ಥದಾರಿಯಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು ಸಂಗೀತದಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ. ವಿದ್ಯಾರ್ಥಿಗಳನ್ನು ಸಮರ್ಪಕವಾಗಿ ಬೆಳೆಸುವಲ್ಲಿ ಪ್ರೇರಕರಾಗಿದ್ದಾರೆ.
ಶಿಕ್ಷಣದಲ್ಲಿ ಭಾರತೀಯ ವಿಚಾರಧಾರೆಗಳನ್ನು ಅಳವಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು, ಉತ್ತಮ ಗುಣನಡತೆ ಹಾಗೂ ದೇಶಪ್ರೇಮವನ್ನು ಬೆಳೆಸುವಲ್ಲಿ ಅವರು ತೋರಿದ ಆಸಕ್ತಿ ಹಾಗೂ ಈ ನಿಟ್ಟಿನಲ್ಲಿ, ಅವರ ಪ್ರಯತ್ನವನ್ನು ಪರಿಗಣಿಸಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸ್ಥಾಪಕ ಚೇರ್‌ಮೇನ್ ಪೂಜ್ಯ ಆಚಾರ್‍ಯ ಅಜಿತ್ ಕುಮಾರ್ ತಿಳಿಸಿದ್ದಾರೆ. ಎಪ್ರಿಲ್ 7 ರಂದು ಬೆಂಗಳೂರಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯುವ, ವಿಶ್ವಧರ್ಮಮಂದಿರ ಅಭಿಯಾನದ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಈ ಗೌರವ ಪ್ರದಾನ ಮಾಡಲಾಗಲಿದೆ. ಕಾರ್‍ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸುವ ವಿಜ್ಞಾನಿ ಪದ್ಮಶ್ರೀ ಡಾ. ಪ್ರಹ್ಲಾದ್ ರಾಮರಾವ್ ಗೌರವ ಪ್ರದಾನ ಮಾಡಲಿದ್ದಾರೆ.

More from the blog

ಇದು ಸರಕಾರಿ ಜಾಗವೋ,ತಾ.ಪಂ.ನ ಜಾಗನಾ? ಇದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...