ವಿಟ್ಲ: ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.


ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ(75) ಮೃತಪಟ್ಟ ವ್ಯಕ್ತಿ. ತನ್ನ ತಮ್ಮನ ಮನೆಗೆ ಹೋದವರು ಅಲ್ಲಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪ್ರಿಲ್ 21ರ ರಾತ್ರಿ 10:30ರಿಂದ 22ರ ಬೆಳಗ್ಗೆ 07:30 ಮದ್ಯೆ ಅವರು ಬಾವಿಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.
ವಯೋ ಸಹಜ ಕಾಯಿಲೆಯ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಡಿಕೊಂಡಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












