Tuesday, January 27, 2026

ಗೋಸಾಗಾಟ ಮಾಹಿತಿದಾರರ ಕೇಸು ಹಾಕುತ್ತಿರುವ ಪೊಲೀಸ್ ಇಲಾಖೆ: ವಿಹೆಚ್‌ಪಿ, ಬಜರಂಗದಳ ಆರೋಪ

ವಿಟ್ಲ: ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಹತ್ಯೆಗಾಗಿ ಅಕ್ರಮ ಸಾಗಾಟ ನಡೆಯುತ್ತಿದೆ. ಪೊಲೀಸರು ಅಕ್ರಮ ಗೋ ಸಾಗಾಟ ನಡೆಸುವವರ ಮೇಲೆ ಕೇಸು ಹಾಕದೇ, ಇದನ್ನು ತಡೆಯುವ ಹಿಂದೂ ಸಂಘಟನೆಯವರ ಮೇಲೆ ಕೇಸು ಹಾಕಲಾಗುತ್ತಿದೆ. ಕಳೆದ ಬಾರಿ ವಿಟ್ಲ ಪ್ರಖಂಡ ವ್ಯಾಪ್ತಿಯಲ್ಲಿ 19 ಪ್ರಕರಣಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದನ್ನು ಪತ್ತೆಹಚ್ಚಲಾಗಿದೆ. ಗೋ ರಕ್ಷಣೆಗೆ ಮುಂದಾಗುವವರನ್ನು ರೌಡಿ ಶೀಟರ್ ಗಳು ಎಂದಾದರೆ ಇದನ್ನು ಉಗ್ರವಾಗಿ ಖಂಡಿಸಿ ಪ್ರತಿಭಟಿಸಬೇಕಾಗುತ್ತದೆ ಎಂದು ವಿಶ್ವಹಿಂದೂ ಪರಿಷತ್ ವಿಟ್ಲ ಪ್ರಖಂಡ ಕಾರ್‍ಯದರ್ಶಿ ಪದ್ಮನಾಭ ಕಟ್ಟೆ ತಿಳಿಸಿದರು.
ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಸಂಘಟನೆಗಳ ಸದಸ್ಯರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು.
ಬಜರಂಗದಳ ಸಂಚಾಲಕ ಅಕ್ಷಯ್ ರಜಪೂತ್ ಕಲ್ಲಡ್ಕ ಮಾತನಾಡಿ ತಿಂಗಳಲ್ಲಿ ಬಕ್ರೀದ್ ಬರುವ ಹಿನ್ನೆಲೆಯಲ್ಲಿ ಅಕ್ರಮ ಗೋಸಾಗಾಟ ಹೆಚ್ಚಾಗುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಕೇರಳಕ್ಕೆ ಅಂಟಿಕೊಂಡಿರುವ ವಿಟ್ಲ ಠಾಣೆಯ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ ಹಾಕುವ ಮೂಲಕ ಅಕ್ರಮ ಗೋಸಾಗಾಟವನ್ನು ತಡೆಯಲು ಮುಂದಾಗಬೇಕು ಮತ್ತು ಅದರ ಹಿಂದೆ ಇರುವ ಆರೋಪಿಗಳನ್ನು ಬಂಧಿಸಬೇಕು. ಇದನ್ನು ಮಾಡದಿದ್ದರೆ ಸಂಘಟನೆಗಳು ಬೀದಿಗೆ ಇಳಿದು ಗೋರಕ್ಷಣೆ ಮಾಡಲು ಮುಂದಾಗಬೇಕಾಗುತ್ತದೆ ಎಂದು ತಿಳಿಸಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್‍ಯದರ್ಶಿ ಜಯಂತ್ ಸಿ.ಎಚ್ ವಿಟ್ಲ, ವಿಟ್ಲ ಪ್ರಖಂಡ ಕಾರ್‍ಯದರ್ಶಿ ಚರಣ್ ಕಾಪುಮಜಲು, ಉಪಾಧ್ಯಕ್ಷ ಜಯಕೊಟ್ಟಾರಿ, ಬಜರಂಗದಳ ಸಹ ಗೋರಕ್ಷ ಪ್ರಮುಖ್ ಯತೀಶ್ ಪೆರುವಾಯಿ ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...