Wednesday, February 12, 2025

ಮುನ್ಸೂಚನೆಯಿಲ್ಲದೇ ವಿದ್ಯುತ್ ಸ್ಥಗಿತಗೊಳಿಸಿದ ಕೆಪಿಟಿಸಿಎಲ್: ಹಿಡಿಶಾಪ ಹಾಕಿದ ಗ್ರಾಹಕರು

ವಿಟ್ಲ: ಯಾವುದೇ ಮುನ್ಸೂಚನೆ ನೀಡದೇ ದಿನಪೂರ್ತಿ ವಿದ್ಯುತ್ ಸ್ಥಗಿತಗೊಳಿಸಿದ ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕಿದ ಘಟನೆ ಸಂಭವಿಸಿದೆ.
ಪ್ರತಿ ಬುಧವಾರ ವಿಟ್ಲ ಭಾಗದಲ್ಲಿ ಟ್ರೀ ಕಟ್ಟಿಂಗ್ ಹಿನ್ನೆಲೆಯಲ್ಲಿ ವಿದ್ಯುತ್ ಸ್ಥಗಿತಗೊಳಿಸಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ ವರೆಗೆ ಹಾಗೂ ಸಂಜೆವರೆಗೂ ವಿದ್ಯುತ್ ಸ್ಥಗಿತಗೊಳಿಸಲಾಗುತ್ತಿದೆ. ಆದರೆ ಬುಧವಾರ ಬೆಳಗ್ಗೆ ಏಳು ಗಂಟೆಗೆ ಕೆಪಿಟಿಸಿಎಲ್ ಅಧಿಕಾರಿಗಳು ವಿದ್ಯುತ್ ಸ್ಥಗಿತಗೊಳಿಸಿದ್ದರು. ಸಂಜೆ ಐದು ಗಂಟೆಯಾದರೂ ವಿದ್ಯುತ್ ಸಂಪರ್ಕ ಬಂದಿಲ್ಲ. ಇದರಿಂದ ಆಕ್ರೋಶಿತರಾದ ಗ್ರಾಹಕರು ಮೆಸ್ಕಾಂ ಇಲಾಖೆಯಲ್ಲಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸಬ್ ಸ್ಟೇಶನ್‌ನಲ್ಲಿ ಕೆಲಸ ಕಾರ್‍ಯ ನಡೆಯುವ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ಇಲಾಖೆ ಸ್ಥಗಿತಗೊಳಿಸಿದ್ದಾರೆ, ಇದಕ್ಕೂ ನಮಗೂ ಸಂಬಂಧವಿಲ್ಲ ಎಂದು ಉತ್ತರಿಸಿದ್ದಾರೆ. ಬಳಿಕ ಗ್ರಾಹಕರು ಕೆಪಿಟಿಸಿಎಲ್ ಅಧಿಕಾರಿ ಸುನೀಲ್ ಅವರಿಗೆ ಕರೆ ಮಾಡಿದಾಗ ಉಡಾಫೆಯಿಂದ ಉತ್ತರಿಸಿದ್ದಾರೆ. ನಮಗೆ ಕೆಲಸ ಇದೆ. ಅದರಿಂದ ತೆಗೆದಿದ್ದೇವೆ. ನಮಗೆ ಇಷ್ಟ ಬಂದಾಗ ವಿದ್ಯುತ್ ಹಾಕುತ್ತೇವೆ, ನೀವು ಫೋನ್ ಕಟ್ ಮಾಡಿ ಎಂದು ಉಡಾಫೆಯಿಂದ ಉತ್ತರಿಸಿ ಪೋನ್ ಕಟ್ ಮಾಡಿದ್ದಾರೆ. ಇದರಿಂದ ಆಕ್ರೋಶಿತರಾದ ಗ್ರಾಮಸ್ಥರು ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಮುಸ್ಲಿಮರಿಗೆ ಉಪವಾಸ ಇರುವುದರಿಂದ ಕೆಪಿಟಿಸಿಎಲ್ ನಿರ್ಧಾರದಿಂದ ತೊಂದರೆ ಅನುಭವಿಸಿದ್ದಾರೆ. ಬೆಳಗ್ಗೆ ಏಳು ಗಂಟೆಗೆ ತೆಗೆದ ವಿದ್ಯುತ್ ಸಂಜೆ ಆರು ಗಂಟೆ ಬಳಿಕ ಹಾಕಿದ್ದಾರೆ. ಯಾವುದೇ ಮುನ್ಸೂಚನೆ ನೀಡದೇ ಬೆಳ್ಳಂಬೆಳಗ್ಗೆ ವಿದ್ಯುತ್ ಸ್ಥಗಿತ ಮಾಡಿದ್ದಲ್ಲದೇ ಈ ಬಗ್ಗೆ ಸಮರ್ಪಕ ಉತ್ತರ ನೀಡದೇ ಬೇಜಾಬ್ದಾರಿತನದಿಂದ ಉತ್ತರಿಸಿದ ಕೆಪಿಟಿಸಿಎಲ್ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...