Thursday, July 10, 2025

ವಿಟ್ಲ: ಸಾರ್ವಜನಿಕ ಇಫ್ತಾರ್ ಕೂಟ

ವಿಟ್ಲ: ವಿ.ಫ್ರೆಂಡ್ಸ್ ವಿಟ್ಲ ಇದರ ವತಿಯಿಂದ ವಿಟ್ಲದ ವಿ.ಎಚ್.ಕಾಂಪ್ಲೆಕ್ಸ್‌ನಲ್ಲಿ ದಾವತ್ ಎ ರಮದಾನ್ ಕಾರ್‍ಯಕ್ರಮವು ಸೋಮವಾರ ನಡೆಯಿತು.
ವಿಟ್ಲದಲ್ಲಿ ಪ್ರಥಮವಾಗಿ ಆರಂಭಿಸಿದ ಸಾರ್ವಜನಿಕ ಇಫ್ತಾರ್ ಕಾರ್‍ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ದೊರಕಿದ್ದು, ನಾಡಿನ ಸೌಹಾರ್ದತೆ, ಏಕತೆ ಹಾಗೂ ಸಮುದಾಯದ ಸಬಲೀಕರಣಕ್ಕೆ ಯುವಕರ ತಂಡ ದಾವತ್ ಎ ರಮದಾನ್ ಮೂಲಕ ಮುನ್ನುಡಿ ಬರೆದಿದ್ದಾರೆ ಎಂದು ದ.ಕ. ಜಿಲ್ಲಾ ವಕ್ಫ್ ಸಮಿತಿ ಸದಸ್ಯರಾದ ರಶೀದ್ ವಿಟ್ಲ ಹೇಳಿದರು.
ಮಾಲಿಕುದ್ದೀನಾರ್ ಸಂಸ್ಥೆಯ ವಿದ್ಯಾರ್ಥಿ ನೌಫಾಲ್ ಕಡಂಬು ರಂಝಾನ್ ಸಂದೇಶ ನೀಡಿ ಪವಿತ್ರ ತಿಂಗಳ ಮಹತ್ವವನ್ನು ವಿವರಿಸಿದರು. ವಿಟ್ಲ ಕೇಂದ್ರ ಜುಮಾ ಮಸೀದಿ ಮಾಜಿ ಅಧ್ಯಕ್ಷ ವಿ.ಎಚ್. ಅಶ್ರಫ್, ಸಂಘಟಕರಾದ ಶಾಕಿರ್ ಅಳಕೆಮಜಲು, ಉಬೈದ್ ವಿಟ್ಲ ಬಝಾರ್, ಕಲಂದರ್ ಪರ್ತಿಪ್ಪಾಡಿ, ಪತ್ರಕರ್ತ ಮಹಮ್ಮದ್ ಅಲಿ ವಿಟ್ಲ, ಅದ್ದು ದೀಪಕ್, ಇಸಾಕ್ ಏರೋ, ಅಶ್ಫಾಕ್ ಮೇಗಿನಪೇಟೆ, ಅಶ್ರಫ್ ಸೆಲೆಕ್ಟ್, ಸಂಶುದ್ದೀನ್ ಹೋಂ ಟೆಚ್, ದಾವೂದು ಒಕ್ಕೆತ್ತೂರು, ಅಬೂಬಕರ್ ಅನಿಲಕಟ್ಟೆ, ಅಝೀಝ್ ಕಡಂಬು, ಇಕ್ಬಾಲ್ ಶೀತಲ್, ಉಮರ್ ಎಡ್ವಕೇಟ್, ಹಾರಿಸ್ ಕೊಡಂಗಾಯಿ ಮೊದಲಾದವರು ಉಪಸ್ಥಿತರಿದ್ದರು.
ಶಾಕಿರ್ ಅಳಕೆಮಜಲು ಸ್ವಾಗತಿಸಿ ಕಾರ್‍ಯಕ್ರಮ ನಿರೂಪಿಸಿದರು.

 

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...