Thursday, January 29, 2026

ವಿಟ್ಲ: ಸಾರ್ವಜನಿಕ ಇಫ್ತಾರ್ ಕೂಟ

ವಿಟ್ಲ: ವಿ.ಫ್ರೆಂಡ್ಸ್ ವಿಟ್ಲ ಇದರ ವತಿಯಿಂದ ವಿಟ್ಲದ ವಿ.ಎಚ್.ಕಾಂಪ್ಲೆಕ್ಸ್‌ನಲ್ಲಿ ದಾವತ್ ಎ ರಮದಾನ್ ಕಾರ್‍ಯಕ್ರಮವು ಸೋಮವಾರ ನಡೆಯಿತು.
ವಿಟ್ಲದಲ್ಲಿ ಪ್ರಥಮವಾಗಿ ಆರಂಭಿಸಿದ ಸಾರ್ವಜನಿಕ ಇಫ್ತಾರ್ ಕಾರ್‍ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ದೊರಕಿದ್ದು, ನಾಡಿನ ಸೌಹಾರ್ದತೆ, ಏಕತೆ ಹಾಗೂ ಸಮುದಾಯದ ಸಬಲೀಕರಣಕ್ಕೆ ಯುವಕರ ತಂಡ ದಾವತ್ ಎ ರಮದಾನ್ ಮೂಲಕ ಮುನ್ನುಡಿ ಬರೆದಿದ್ದಾರೆ ಎಂದು ದ.ಕ. ಜಿಲ್ಲಾ ವಕ್ಫ್ ಸಮಿತಿ ಸದಸ್ಯರಾದ ರಶೀದ್ ವಿಟ್ಲ ಹೇಳಿದರು.
ಮಾಲಿಕುದ್ದೀನಾರ್ ಸಂಸ್ಥೆಯ ವಿದ್ಯಾರ್ಥಿ ನೌಫಾಲ್ ಕಡಂಬು ರಂಝಾನ್ ಸಂದೇಶ ನೀಡಿ ಪವಿತ್ರ ತಿಂಗಳ ಮಹತ್ವವನ್ನು ವಿವರಿಸಿದರು. ವಿಟ್ಲ ಕೇಂದ್ರ ಜುಮಾ ಮಸೀದಿ ಮಾಜಿ ಅಧ್ಯಕ್ಷ ವಿ.ಎಚ್. ಅಶ್ರಫ್, ಸಂಘಟಕರಾದ ಶಾಕಿರ್ ಅಳಕೆಮಜಲು, ಉಬೈದ್ ವಿಟ್ಲ ಬಝಾರ್, ಕಲಂದರ್ ಪರ್ತಿಪ್ಪಾಡಿ, ಪತ್ರಕರ್ತ ಮಹಮ್ಮದ್ ಅಲಿ ವಿಟ್ಲ, ಅದ್ದು ದೀಪಕ್, ಇಸಾಕ್ ಏರೋ, ಅಶ್ಫಾಕ್ ಮೇಗಿನಪೇಟೆ, ಅಶ್ರಫ್ ಸೆಲೆಕ್ಟ್, ಸಂಶುದ್ದೀನ್ ಹೋಂ ಟೆಚ್, ದಾವೂದು ಒಕ್ಕೆತ್ತೂರು, ಅಬೂಬಕರ್ ಅನಿಲಕಟ್ಟೆ, ಅಝೀಝ್ ಕಡಂಬು, ಇಕ್ಬಾಲ್ ಶೀತಲ್, ಉಮರ್ ಎಡ್ವಕೇಟ್, ಹಾರಿಸ್ ಕೊಡಂಗಾಯಿ ಮೊದಲಾದವರು ಉಪಸ್ಥಿತರಿದ್ದರು.
ಶಾಕಿರ್ ಅಳಕೆಮಜಲು ಸ್ವಾಗತಿಸಿ ಕಾರ್‍ಯಕ್ರಮ ನಿರೂಪಿಸಿದರು.

 

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...