ವಿಟ್ಲ: ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಂಗವಾಗಿ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಮತ್ತು ಇತರ ಪದಾಧಿಕಾರಿಗಳ ನೇತೃತ್ವದಲ್ಲಿ ಕನ್ಯಾನದ ಭಾರತ ಸೇವಾಶ್ರಮದ 125 ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸೇವಾಶ್ರಮದ ಮುಖ್ಯಸ್ಥ ಈಶ್ವರ ಭಟ್, ಸಂಘಟನೆಯ ಗೌರವ ಸಲಹೆಗಾರ ರವಿಚಂದ್ರ ಪಡುಬೆಟ್ಟು, ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ, ಕಾರ್ಯದರ್ಶಿ ಚಂದ್ರಶೇಖರ್ ಯು ವಿಟ್ಲ ಮತ್ತು ಸದಸ್ಯ ಡಿ ಬಿ ಆನಂದ ಹಳಿರ ಇವರು ಉಪಸ್ಥಿತರಿದ್ದರು.
