Saturday, June 28, 2025

ವಿಟ್ಲ ಬೆನಕ ಕ್ಲಿನಿಕ್‌ನಲ್ಲಿ ನೂತನ ನೋಂದಾವಣಾ ವ್ಯವಸ್ಥೆಯ ಲೋಕಾರ್ಪಣೆ, ಸಮವಸ್ತ್ರ ವಿತರಣೆ

ವಿಟ್ಲ: ಆಪ್ ಮೂಲಕ ನೋಂದಾವಣೆ ಮಾಡಿಕೊಳ್ಳುವ ಸೌಲಭ್ಯವನ್ನು ವಿಟ್ಲದಲ್ಲಿ ಪ್ರಥಮವಾಗಿ ಅಳವಡಿಸಿಕೊಂಡಿರುವುದು ದೂರದ ಊರುಗಳಿಂದ ತಪಾಸಣೆಗೆ ಬರುವ ರೋಗಿಗಳಿಗೆ ಅನುಕೂಲಕರವಾಗುವ ದೃಷ್ಟಿಯಿಂದ ಸಕಾಲಿಕವಾಗಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ವೈದ್ಯ ಡಾ.ಕೆ.ಜಿ.ಭಟ್ ಅಭಿಪ್ರಾಯ ಪಟ್ಟರು.
ಅವರು ವಿಟ್ಲ ಬೆನಕ ಕ್ಲಿನಿಕ್‌ನಲ್ಲಿ ನೂತನ ಸಮವಸ್ತ್ರ ವಿತರಣಾ ಕಾರ್‍ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಟ್ಲ ಸುರಕ್ಷಾ ಹೆಲ್ತ್ ಕ್ಲಿನಿಕ್‌ನ ವೈದ್ಯ ಡಾ. ಗೀತಪ್ರಕಾಶ್ ಆಪ್ ನೋಂದಾವಣಾ ಸೌಲಭ್ಯ ಲೋಕಾರ್ಪಣೆಗೊಳಿಸಿ ಮಾತನಾಡಿ, ವೈದ್ಯರು ಮತ್ತು ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯವಿರಬೇಕು. ಗುಣಮಟ್ಟದ ಚಿಕಿತ್ಸೆಗೆ ಶುಲ್ಕವೂ ಅಧಿಕವಾಗಿರುತ್ತದೆ ಎಂಬ ವಿಚಾರವನ್ನು ರೋಗಿಗಳ ಕುಟುಂಬದವರು ಅರ್ಥೈಸಿಕೊಳ್ಳಬೇಕೆಂದು ತಿಳಿಸಿದರು.
ಮಂಗೇಶ್ ಭಟ್ ಪ್ರಾರ್ಥನೆ ಹಾಡಿದರು. ಬೆನಕ ಕ್ಲಿನಿಕ್‌ನ ಡಾ. ಅರವಿಂದ್ ಸ್ವಾಗತಿಸಿ, ಪ್ರಸ್ತಾವಿಸಿದರು. ಡಾ. ಶಿವಕುಮಾರ್ ವಂದಿಸಿದರು. ಪುಷ್ಪ ಕಾರ್‍ಯಕ್ರಮ ನಿರೂಪಿಸಿದರು. ಕ್ಲಿನಿಕ್‌ನ ಸಿಬ್ಬಂದಿಗಳಾದ ಸೌಮ್ಯ, ಚಿಂತನ, ಗುಲಾಬಿ, ವನಿತ, ಶಶಿ, ಚಿತ್ರ, ಗಂಗಾಧರ, ಭಾರತಿ, ವನಜ, ಹರೀಶ್ ಸಹಕರಿಸಿದರು.

More from the blog

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...