Saturday, February 8, 2025

ವಿಟ್ಲ ಬೆನಕ ಕ್ಲಿನಿಕ್‌ನಲ್ಲಿ ನೂತನ ನೋಂದಾವಣಾ ವ್ಯವಸ್ಥೆಯ ಲೋಕಾರ್ಪಣೆ, ಸಮವಸ್ತ್ರ ವಿತರಣೆ

ವಿಟ್ಲ: ಆಪ್ ಮೂಲಕ ನೋಂದಾವಣೆ ಮಾಡಿಕೊಳ್ಳುವ ಸೌಲಭ್ಯವನ್ನು ವಿಟ್ಲದಲ್ಲಿ ಪ್ರಥಮವಾಗಿ ಅಳವಡಿಸಿಕೊಂಡಿರುವುದು ದೂರದ ಊರುಗಳಿಂದ ತಪಾಸಣೆಗೆ ಬರುವ ರೋಗಿಗಳಿಗೆ ಅನುಕೂಲಕರವಾಗುವ ದೃಷ್ಟಿಯಿಂದ ಸಕಾಲಿಕವಾಗಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ವೈದ್ಯ ಡಾ.ಕೆ.ಜಿ.ಭಟ್ ಅಭಿಪ್ರಾಯ ಪಟ್ಟರು.
ಅವರು ವಿಟ್ಲ ಬೆನಕ ಕ್ಲಿನಿಕ್‌ನಲ್ಲಿ ನೂತನ ಸಮವಸ್ತ್ರ ವಿತರಣಾ ಕಾರ್‍ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಟ್ಲ ಸುರಕ್ಷಾ ಹೆಲ್ತ್ ಕ್ಲಿನಿಕ್‌ನ ವೈದ್ಯ ಡಾ. ಗೀತಪ್ರಕಾಶ್ ಆಪ್ ನೋಂದಾವಣಾ ಸೌಲಭ್ಯ ಲೋಕಾರ್ಪಣೆಗೊಳಿಸಿ ಮಾತನಾಡಿ, ವೈದ್ಯರು ಮತ್ತು ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯವಿರಬೇಕು. ಗುಣಮಟ್ಟದ ಚಿಕಿತ್ಸೆಗೆ ಶುಲ್ಕವೂ ಅಧಿಕವಾಗಿರುತ್ತದೆ ಎಂಬ ವಿಚಾರವನ್ನು ರೋಗಿಗಳ ಕುಟುಂಬದವರು ಅರ್ಥೈಸಿಕೊಳ್ಳಬೇಕೆಂದು ತಿಳಿಸಿದರು.
ಮಂಗೇಶ್ ಭಟ್ ಪ್ರಾರ್ಥನೆ ಹಾಡಿದರು. ಬೆನಕ ಕ್ಲಿನಿಕ್‌ನ ಡಾ. ಅರವಿಂದ್ ಸ್ವಾಗತಿಸಿ, ಪ್ರಸ್ತಾವಿಸಿದರು. ಡಾ. ಶಿವಕುಮಾರ್ ವಂದಿಸಿದರು. ಪುಷ್ಪ ಕಾರ್‍ಯಕ್ರಮ ನಿರೂಪಿಸಿದರು. ಕ್ಲಿನಿಕ್‌ನ ಸಿಬ್ಬಂದಿಗಳಾದ ಸೌಮ್ಯ, ಚಿಂತನ, ಗುಲಾಬಿ, ವನಿತ, ಶಶಿ, ಚಿತ್ರ, ಗಂಗಾಧರ, ಭಾರತಿ, ವನಜ, ಹರೀಶ್ ಸಹಕರಿಸಿದರು.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...