Tuesday, July 1, 2025

“ಶ್ರದ್ಧೆಯೇ ಯಶಸ್ಸಿನ ಕೀಲಿಕೈ” ಒಡಿಯೂರು ಶ್ರೀ

ವಿಟ್ಲ: ಜಗತ್ತನ್ನು ಬೆಳಗುವವ ಸೂರ್ಯ, ಮನಸ್ಸಿಗೆ ಉಲ್ಲಾಸ ತರುವವನು ಚಂದ್ರ, ಮನುಷ್ಯನ ಒಳಗಿರುವ ಆತ್ಮ ಜ್ಯೋತಿಯಿಂದ ಎಲ್ಲವನ್ನು ನೋಡಲು ಸಾಧ್ಯವಾಗುತ್ತದೆ. ಮಾನವನು ಅಂತರಂಗದಲ್ಲಿರುವ ಬೆಳಕನ್ನು ಉಳಿಸಿ ಬೆಳೆಸಿಕೊಳ್ಳಬೇಕು. ಯಶಸ್ಸಿಗೆ ಶ್ರದ್ಧೆಯೆಂಬ ಕೀಲಿ ಕೈ ಬೇಕು. ಭಾರತವೇ ಒಂದು ಜ್ಯೋತಿ, ಅದು ವಿಶ್ವಕ್ಕೆ ಆಧ್ಯಾತ್ಮದ ಅವಿನಾಶಿ ಬೆಳಕನ್ನು ನೀಡಿದೆ ಎಂದು ನುಡಿದರು.
ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಹಾಗೂ ಗ್ರಾಮೋತ್ಸವದ ಅಂಗವಾಗಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಆಯೋಜಿಸಿದ ಬಂಟ್ವಾಳ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಸಭೆಯಲ್ಲಿ ಶಾಲಾ ಸಂಚಾಲಕರಾದ ಸೇರಾಜೆ ಗಣಪತಿ ಭಟ್, ಕ್ಷೇತ್ರದ ಕಾರ್ಯನಿರ್ವಾಹಕರಾದ ಪದ್ಮನಾಭ ಒಡಿಯೂರು, ಶಾಲಾ ಮುಖ್ಯೋಪಾಧ್ಯಾಯರಾದ ಜಯಪ್ರಕಾಶ ಶೆಟ್ಟಿ ಎ. ಉಪಸ್ಥಿತರಿದ್ದರು.
’ನಾನು ಮತ್ತು ಭಾರತ’ ಎಂಬ ವಿಷಯವನ್ನು ಪ್ರಬಂಧ ವಿಷಯವಾಗಿ ಆಯ್ಕೆ ಮಾಡಲಾಯಿತು. ಬಂಟ್ವಾಳ ತಾಲೂಕಿನಿಂದ ಆಗಮಿಸಿದ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮವನ್ನು ವಿದ್ಯಾಪೀಠದ ಅಚಿಂತ್ಯಾಗೌರಿ ಸ್ವಾಗತಿಸಿದರು. ರಜತ್ ವಂದಿಸಿದರು. ದೀಪಶ್ರೀ ನಿರೂಪಿಸಿದರು. ಶಿಕ್ಷಕ-ಶಿಕ್ಷಕಿಯರು ಸಹಕರಿಸಿದರು.

 

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...