Wednesday, February 12, 2025

ಕುಂಡಡ್ಕ: ಬಿರುವೆರ್‍ನ ಆಟಿಕೂಟ

ವಿಟ್ಲ: ಯುವ ಪೀಳಿಗೆಗೆ ಮಣ್ಣಿನ ಮಹತ್ವದ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದೆ. ಆಟಿ ಆಚರಣೆಗಳು ನಮ್ಮ ಹಿರಿಯರು ಬದುಕಿನಲ್ಲಿ ಅನುಭವಿಸಿದ್ದ ಸಂಕಷ್ಟ, ಸವಾಲು, ಜೀವನ ಪದ್ಧತಿಗಳ ಬಗ್ಗೆ ತಿಳಿಯುವುದರೊಂದಿಗೆ ಅವರ ಆಚಾರ ವಿಚಾರ, ಆಹಾರ ಪದ್ಧತಿ, ಕೃಷಿ ಸಂಸ್ಕೃತಿಗಳನ್ನು ನೆನಪಿಸಲು ಪೂರಕವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿನ ಸಹಾಯಕ ಕಾರ್ಯದರ್ಶಿ ಸಚಿನ್ ಕುಮಾರ್ ಹೇಳಿದರು. ಮಕ್ಕಳ
ಅವರು ಭಾನುವಾರ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ನಡೆದ ಬಿರುವೆರ್‍ನ ಆಟಿಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೇವಲ ಸಂಘಗಳನ್ನು ಕಟ್ಟಿಕೊಂಡಾಗ ಮಾತ್ರ ಸಂಘಟನೆ ನೈಜ ಉದ್ದೇಶ ಈಡೇರುವುದಿಲ್ಲ. ಬಿಲ್ಲವರು ಸ್ವಾರ್ಥಪರ ಹೋರಾಟಗಳನ್ನು ಬದಿಗಿರಿಸಿ ಸಮಾಜಪರ ಉತ್ತಮ ಕಾರ್ಯಗಳಲ್ಲಿ ಸಂಘಟನೆಗಳನ್ನು ತೊಡಗಿಸಬೇಕು. ಆಟಿ ಆಚರಣೆ ತುಳುನಾಡಿನ ಮೂಲನಂಬಿಕೆ ಉಳಿಯಲು ಪ್ರೇರಣೆಯಾಗಿದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳದ ವಕೀಲ ಪದ್ಮನಾಭ ಪೂಜಾರಿ ಸಣ್ಣಗುತ್ತು ತಿಳಿಸಿದರು.
ಕುಂಡಡ್ಕ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ ಮರುವಾಳ ಅಧ್ಯಕ್ಷತೆ ವಹಿಸಿದ್ದರು. ಭಾರತ ಶಾಮಿಯಾನದ ಸಂಜೀವ ಪೂಜಾರಿ, ಕುಂಡಡ್ಕ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷ ದೇಜಪ್ಪ ಪೂಜಾರಿ ನಿಡ್ಯ, ಕೋಶಾಧಿಕಾರಿ ಕೃಷ್ಣಪ್ಪ ಪೂಜಾರಿ ಬೇರಿಕೆ, ಮಹಿಳಾ ಘಟಕದ ಗೌರವಾಧ್ಯಕ್ಷೆ ಸುಮ ದೇಜಪ್ಪ ಪೂಜಾರಿ, ಅಧ್ಯಕ್ಷೆ ಬಬಿತಾ ಉಮೇಶ್ ಉಪಸ್ಥಿತರಿದ್ದರು.
ಮೋಹನ್ ಗುರ್ಜಿನಡ್ಕ ಸ್ವಾಗತಿಸಿದರು. ಯಶು ಕಟ್ನಾಜೆ ವಂದಿಸಿದರು. ಹರೀಶ್ ನೀರಕೋಡಿ ಕಾರ್‍ಯಕ್ರಮ ನಿರೂಪಿಸಿದರು.
ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು. ವಸಂತ ಸುವರ್ಣ ಬನ್ನೂರು ಹಾಗೂ ಸ್ಥಳೀಯರಿಂದ ಭಕ್ತಿಗೀತೆ ನಡೆಯಿತು. ಇದೇ ಸಂದರ್ಭದಲ್ಲಿ ನವವಿವಾಹಿತರಾದ ಸತೀಶ್-ಸೌಜನ್ಯ ಹಾಗೂ ಭಾರತಿ-ರಮೇಶ್ ದಂಪತಿಗಳನ್ನು ಗುರುತಿಸಿ ನೆನಪಿನ ಕಾಣಿಕೆ ನೀಡಲಾಯಿತು. ತುಳುನಾಡಿನಲ್ಲಿ ಬಳಸಲ್ಪಡುವ ಆಟಿ ತಿಂಗಳ ವಿಶೇಷ ೨೧ ಖಾದ್ಯಗಳನ್ನು ಹಂಚಲಾಯಿತು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...