Monday, January 26, 2026

ಪರರನ್ನು ಕ್ಷಮಿಸಿ ಜೀವಿಸುವುದೇ ಶತಮಾನೋತ್ತರ ಬೆಳ್ಳಿ ಹಬ್ಬದ ಆಚರಣೆ : ಫಾದರ್ ಮ್ಯಾಕ್ಸಿಂ ನೊರೊನ್ಹಾ

ವಿಟ್ಲ: ಪರಸ್ಪರ ಒಬ್ಬರಿಗೊಬ್ಬರು ಕ್ಷಮಿಸಿ, ಪ್ರೀತಿ ವಿಶ್ವಾಸದಿಂದ ಜೀವನ ನಡೆಸುವುದೇ ಶತಮಾನೋತ್ತರ ಬೆಳ್ಳಿ ಹಬ್ಬದ ನಿಜವಾದ ಸಂಭ್ರಮಾಚರಣೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಪ್ರಧಾನ ಗುರು ಅತೀ ವಂದನೀಯ ಮ್ಯಾಕ್ಸಿಂ ಎಲ್ ನೊರೊನ್ಹಾ ಹೇಳಿದರು.
ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪದ ಬೊರಿಮಾರ್ ಚರ್ಚ್ ಗೆ 125 ವರ್ಷದ ತುಂಬಿದ ಸವಿ ನೆನಪಿಗಾಗಿ ಹೊಸ ವಿನ್ಯಾಸದೊಂದಿಗೆ ನಿರ್ಮಿಸಲಾದ “ಮಾತೆ ಮರಿಯಮ್ಮ”ನವರ ಗ್ರೊಟ್ಟೊವನ್ನು ಮಂಗಳವಾರ ಉದ್ಘಾಟಿಸಿ, ಆಶೀರ್ವಚನ ನೀಡಿದರು.
ಕಳೆದ ನೂರಿಪ್ಪತ್ತೈದು ವರ್ಷಗಳಲ್ಲಿ ಎಲ್ಲರನ್ನೂ ಒಂದಾಗಿ ಬೆಸೆಯುವ ಕೇಂದ್ರವಾಗಿ ಬೆಳೆದ ಚರ್ಚ್‌ಗೆ ಹೊಸದಾಗಿ ನಿರ್ಮಿಸಿದ ಗ್ರೊಟ್ಟೋ ಹೊಸ ಶಕ್ತಿ ಮತ್ತು ಸೌಂದರ್ಯ ವನ್ನು ತುಂಬಿದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರು ವಲಯದ ಪ್ರಧಾನ ಧರ್ಮಗುರುಗಳು ವಂದನೀಯ ಆಲ್ಫ್ರೆಡ್ ಜೆ. ಪಿಂಟೊ ರವರು ಮಾತನಾಡಿ, ಬೊರಿಮಾರ್ ಚರ್ಚ್ ಒಂದು ಸಣ್ಣ ದೇವಾಲಯವಾದರೂ ಕಳೆದ ಒಂದು ವರ್ಷದಿಂದ ನಡೆಸಿದ ಅವಿಸ್ಮರಣೀಯ ಕಾರ್ಯಕ್ರಮಗಳು ಎಲ್ಲಾ ಚರ್ಚ್ ಗಳಿಗೆ ಮಾದರಿಯಾಗಿವೆ ಎಂದು ಶ್ಲಾಘಿಸಿದರು.
ಇದೇ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ನೂತನ ಗ್ರೊಟ್ಟೊ ನಿರ್ಮಾಣಕ್ಕೆ ದಾನಿಗಳಾಗಿ ಸಹಕರಿಸಿದ ತೆರೆಜಾ ಫೆರ್ನಾಂಡಿಸ್, ಶರಲ್ ಲಸ್ರಾದೊ, ವಿನೋಲಾ ಕ್ರಾಸ್ತ, ರೀನಾ ಡಿ’ಸೋಜ ಮತ್ತು ಜೆಸಿಂತಾ ಸಿಕ್ವೇರಾರವರನ್ನು ಸನ್ಮಾನಿಸಲಾಯಿತು.
ಗ್ರೊಟ್ಟೊ ನಿರ್ಮಾಣ ಮಾಡಿದ ವಾಲ್ಟರ್ ಪಿಂಟೊ ವಾಮಂಜೂರ್, ಪ್ರಧಾನ ಧರ್ಮಗುರು ಅತೀ ವಂದನೀಯ ಮ್ಯಾಕ್ಸಿಂ ನೊರೊನ್ಹಾ ಮತ್ತು ವಂದನೀಯ ಫಾದರ್ ಆಲ್ಫ್ರೆಡ್ ಪಿಂಟೊರವರನ್ನು ಚರ್ಚ್ ಪಾಲನಾ ಸಮಿತಿಯ ಪರವಾಗಿ ಗೌರವಿಸಲಾಯಿತು.
ಚರ್ಚ್ ಧರ್ಮಗುರು ಫಾದರ್ ಗ್ರೆಗರಿ ಪಿರೇರಾ, ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್, ಕಾರ್ಯದರ್ಶಿ ಪ್ರೀತಿ ಪಿರೇರಾ ಮತ್ತು ಸಿಸ್ಟರ್ ನ್ಯಾನ್ಸಿ ಉಪಸ್ಥಿತರಿದ್ದರು. ಕಾರ್ಯಕ್ರ‌ಮದ ಬಳಿಕ ನೆರೆದ ಎಲ್ಲಾ ಭಕ್ತಾದಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...