Monday, January 26, 2026

’ಜನರ ನಡುವೆ ಸಿಗುವ ಗೌರವ ಅವಿಸ್ಮರಣೀಯ’ ಎಸ್.ಆರ್. ಸತೀಶ್ಚಂದ್ರ

ಜೀವನದಲ್ಲಿ ಇತರರಿಗೆ ತೊಂದರೆ ಕೊಡದೇ, ನಾಲ್ಕು ಜನರಿಗೆ ಹಿತವಾಗುವ ಕಾರ್ಯವನ್ನು ಸಮಾಜ ಒಂದಲ್ಲ ಒಂದು ದಿನ ಗುರುತಿಸಿ ಗೌರವಿಸುತ್ತದೆ. ನೂರಾರು ಜನರ ಸಮಕ್ಷಮದಲ್ಲಿ ಸಿಗುವ ಇಂತಹ ಗೌರವದ ಕ್ಷಣ ಅವಿಸ್ಮರಣೀಯವಾಗಿರುತ್ತದೆ ಎಂದು ಕ್ಯಾಂಪ್ಕೋ ಸಹಕಾರಿ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದರು.
ಅವರು ಪುಣಚ ಕಲ್ಪವೃಕ್ಷ ಫ್ರೆಂಡ್ಸ್, ಆದರ್ಶ ಫ್ರೆಂಡ್ಸ್ ವತಿಯಿಂದ ಪುಣಚ ಶ್ರೀಶಾರದೋತ್ಸವ ಸಮಿತಿಯ ಆಶ್ರಯದಲ್ಲಿ ಪರಿಯಾಲ್ತಡ್ಕದಲ್ಲಿ ನಡೆದ ೩೭ನೇ ಶಾರದೋತ್ಸವದ ಸಂದರ್ಭದಲ್ಲಿ ತಾ.ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಹಾಗೂ ಮೂವರು ಸಾಧಕರನ್ನು ಸನ್ಮಾನಿಸಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಶ್ಮೀರದಲ್ಲಿದ್ದ 370ನೇ ವಿಧಿ ರದ್ದತಿ ದೇಶ ಸ್ವಾತಂತ್ರ್ಯ ಬಳಿಕ ದೇಶದಲ್ಲಾದ ಗುರುತರ ಮೈಲಿಗಲ್ಲು. ಭಾರತ ಜಗತ್ತಿನ ನಡುವೆ ಸದೃಢವಾಗಿ ಬೆಳೆಯುತ್ತಿದೆ ಎಂದರು.
ಮುಖ್ಯ ಅತಿಥಿಯಾಗಿ ವಿಟ್ಲ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಅರುಣ್ ವಿಟ್ಲ, ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಮಾರಪ್ಪ ಶೆಟ್ಟಿ, ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ರಮೇಶ್ ನಾಯ್ಕ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಈ ಸಾಲಿನ ತಾ.ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಪುಣಚ ದೇವಿನಗರ ಶ್ರೀದೇವಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ ಮತ್ತು ತಾ.ಮಟ್ಟದ ಉತ್ತಮ ಸಾಧಕ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಭಾಸ್ಕರ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ದೈವ ನರ್ತಕ ಮೋನಪ್ಪ ಅಜಿಲ ಸಂಕೇಶ, ಪುಣಚ ಅಂಚೆಪಾಲಕ ತೀರ್ಥಾನಂದ ಬಾಳೆಕುಮೇರಿ, ಹಿರಿಯ ದರ್ಜಿ ಬಾಬು ಗೌಡ ಗುರ್ಮೆ ಅವರಿಗೆ ಗ್ರಾಮ ಗೌರವ ನೀಡಲಾಯಿತು.
ರಾಮಕೃಷ್ಣ ಮೂಡಂಬೈಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನಿತೀಶ್ ದೇವಿನಗರ ವಂದಿಸಿದರು. ಇದೇ ಸಂದರ್ಭದಲ್ಲಿ ನೂತನವಾಗಿ ಸ್ಥಾಪನೆಗೊಂಎ ಪುಣಚ ಕಲ್ಪವೃಕ್ಷ ಫ್ರೆಂಡ್ಸ್ ಸಂಘಟನೆ ಉದ್ಘಾಟನೆಗೊಂಡಿತು.
ಸಭೆಯ ಬಳಿಕ ಮಂಗಳೂರಿನ ಸುಸ್ವರ ಸಂಗೀತ ಬಳಗದವರಿಂದ ಗಾಯನ, ನೃತ್ಯ, ಹಾಸ್ಯ ತುಣುಕುಗಳ ವೈವಿಧ್ಯಮಯ ರಸಮಂಜರಿ ಪ್ರದರ್ಶನಗೊಂಡಿತು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...