ವಿಟ್ಲ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರದಲ್ಲಿದ್ದ ಮಹಿಳೆ ಸಹಿತ ಇಬ್ಬರು ಗಾಯಗೊಂಡ ಘಟನೆ ಮಾಣಿ ಜಂಕ್ಷನ್ ನಲ್ಲಿ ಸಂಭವಿಸಿದೆ.


ಬುಡೋಳಿ ನಿವಾಸಿಗಳಾದ ಸವಾರ ಅಬ್ದುಲ್ ರಜಾಕ್ ಮತ್ತು ಅವರ ಪತ್ನಿ ಖತೀಜಮ್ಮ ಗಾಯಗೊಂಡವರು. ಅವರನ್ನು ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನೇರಳಕಟ್ಟೆಯಲ್ಲಿ ಮದುವೆ ಸಮಾರಂಭ ಮುಗಿಸಿಕೊಂಡು ಮನೆಯತ್ತ ತೆರಳುತ್ತಿದ್ದ ವೇಳೆ
ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಪೊಲೀಸರ ಸಹಕಾರದಲ್ಲಿ ಪತ್ತೆ ಹಚ್ಚಿದ್ದಾರೆ.