Thursday, January 29, 2026

ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ಉದ್ಘಾಟನೆ

ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ನ ನೂತನ ತರಗತಿ ವಿಟ್ಲದಲ್ಲಿ ಡಿ. 4 ರಂದು ಶುಭಾರಂಭಗೊಂಡಿತು. ಇದರ ಉದ್ಘಾಟನೆಯನ್ನು ಉದ್ಯಮಿ ರಾಧಾಕೃಷ್ಣ ನಾಯಕ್ ನೆರವೇರಿಸಿದರು. ಕಾಸರಗೋಡು ರಸ್ತೆಯ ವಜ್ರ ಗೋಲ್ಡ್ ಎದುಗಡೆಯ ಕಟ್ಟಡದ ಮೊದಲನೇ ಮಹಡಿಯಲ್ಲಿ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ವಿಠ್ಠಲ ಹೈಸ್ಕೂಲ್‌ನ ಉಪಪ್ರಾಂಶುಪಾಲ ಕಿರಣ್ ಕುಮಾರ್, ಖ್ಯಾತ ವ್ಯಂಗ್ಯ ಚಿತ್ರಗಾರ, ವಿಠ್ಠಲ ಹೈಸ್ಕೂಲ್‌ನ ಚಿತ್ರಕಲಾ ಅಧ್ಯಾಪಕ ಉದಯ್ ವಿಟ್ಲ ಆಗಮಿಸಿದ್ದರು. ತತ್ವ ಸ್ಕೂಲ್ ಆಫ್ ಆರ್ಟ್ ನ ನಿರ್ದೇಶಕ ಟೀಲಾಕ್ಷ ನಿರೂಪಿಸಿದರು. ಕಲಾಶ್ರೀ ಪ್ರಾರ್ಥಿಸಿದರು.

ತರಗತಿಗಳು: ಪೆನ್ಸಿಲ್ ಶೇಡಿಂಗ್, ವಾಟರ್ ಕಲರ್, ಪೋಸ್ಟರ್ ಕಲರ್, ಆಯಿಲ್ ಪೆಸ್ಟಲ್, ಸಾಂಪ್ರದಾಯಿಕ ಚಿತ್ರಕಲೆ, ಆಯಿಲ್ ಪೈಂಟಿಂಗ್, ಆಕ್ರಲಿಕ್ ಹೀಗೆ ನಾನ ತರಬೇತಿಗಳು ಲಭ್ಯ. ಗುರುವಾರ ಸಂಜೆ 4ರಿಂದ 7 ಗಂಟೆಯವರೆಗೆ ಹಾಗೂ ಆದಿತ್ಯವಾರ 9 ರಿಂದ 1 ಗಂಟೆಯವರೆಗೆ ತರಗತಿಗಳು ನಡೆಯುತ್ತವೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...