Wednesday, February 4, 2026

ವಿಟ್ಲ: ವಿದೇಶದಿಂದ ಊರಿಗೆ ಬಂದಿದ್ದ ಯುವಕ ಅನಾರೋಗ್ಯದಿಂದ ಸಾವು

ವಿಟ್ಲ: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು.

ಇವರು ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ ಮೂರು ದಿನದ ಸ್ವದೇಶಕ್ಕೆ ಬಂದಿದ್ದರು. ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿ ಇದ್ದಾರೆ.

More from the blog

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

Vittla : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಹಲ್ಲೆ – ಆರೋಪಿಗಳು ವಶಕ್ಕೆ

ವಿಟ್ಲ : ವ್ಯಕ್ತಿಯೋರ್ವರು ಮಾರ್ನಮಿಗುಡ್ಡೆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಮೂವರು ಅಪರಿಚಿತ ಮುಸುಕುಧಾರಿಗಳು ತಡೆದು ಹಲ್ಲೆ ನಡೆಸಿ, ಕೈಯಿಂದ ಮತ್ತು ಕಟ್ಟಿಗೆ ತುಂಡಿನಿಂದ ಹೊಡೆದು ಗಾಯಗೊಳಿಸಿ, ಅವರ ಬಳಿ ಇದ್ದ ಮೊಬೈಲ್...

Vittla : ನ್ಯಾಯವಾದಿಯ ಮನೆಗೆ ನುಗ್ಗಿ ಕಳ್ಳತನ..

ವಿಟ್ಲ: ನ್ಯಾಯವಾದಿಯೊಬ್ಬರ ಮನೆಗೆ ನುಗ್ಗಿ ಕಳ್ಳರು ಕಳ್ಳತನ ನಡೆಸಿದ ಘಟನೆ ವಿಟ್ಲದ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ನಡೆದಿದೆ. ಅಡ್ವಕೇಟ್ ಸಫಿಯಾ ನೌಫಲ್ ಅವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಮನೆಮಂದಿ ಎಲ್ಲ ಒಂದು ತಿಂಗಳ...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...