Saturday, June 28, 2025

ಎರಡು ಅಂಗಡಿಗಳಿಗೆ ನುಗ್ಗಿದ ಕಳ್ಳರು : ನಗದು, ದಿನಸಿ ಸಾಮಾಗ್ರಿ ಕಳವು

ವಿಟ್ಲ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.

ವಿಟ್ಲ ಪೊಲೀಸ್ ಠಾಣೆಯ ಹಿಂಭಾಗ, ವಶ ಪಡಿಸಿಕೊಂಡ ವಾಹನಗಳನ್ನು ಸಂಗ್ರಹಿಸುಡುವ ಸ್ಥಳವಿದ್ದು, ಅದಕ್ಕೆ ಹೋಗುವ ರಸ್ತೆಯಲ್ಲೇ ಮಹಮ್ಮದ್ ಹಾಜಿ ಮಾಲೀಕತ್ವದ ದಿನಸಿ ಅಂಗಡಿಯಿದ್ದು, ಅದಕ್ಕೆ ಕಳ್ಳರು ಕನ್ನ ಹಾಕಿದ್ದಾರೆ. ಈ ಮೂಲಕ ವಿಟ್ಲ ಠಾಣಾ ಪೊಲೀಸರ ಭಯ ತಮ್ಮಗಿಲ್ಲ ಎಂದು ಕಳ್ಳರು ಘಂಟಘೋಷವಾಗಿ ಸಾರಿದ್ದಾರೆ.

ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಕಳ್ಳರು ಕೃತ್ಯ ಎಸಗಿರುವುದು ಕಾಣಿಸುತ್ತಿದೆ. ದಿನಸಿ ಅಂಗಡಿಯ ಹಿಂಭಾಗದಲ್ಲಿ ಛಾವಣಿಯ ಹಂಚು ತೆಗೆದು ಒಳ ನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ನಲ್ಲಿದ್ದ ರೂ ೮೦೦೦ ಮತ್ತು ಕಟ್ಟಿಟ್ಟಿದ್ದ ದಿನಸಿ ಸಾಮಾಗ್ರಿಯನ್ನು ಹೊತ್ತೊಯ್ದಿದ್ದಾರೆ.

ಬಳಿಕ ಪಕ್ಕದ ದೀಪಕ್ ಬೀಡಿ ಕಂಟ್ರಾಕ್ಟರ್ ನಿಸಾರ್ ವಿ.ಎಸ್. ಅವರಿಗೆ ಸೇರಿದ ಬೀಡಿ ಬ್ರ್ಯಾಂಚ್ ಹಿಬ್ಬಂದಿ ಬಾಗಿಲು ಮುರಿದು, ಒಳ ನುಗ್ಗಿದ್ದ ಕಳ್ಳರು, ಸಂಪೂರ್ಣ ಜಾಲಾಡಿ ಅಲ್ಲಿದ್ದ ಚಿಲ್ಲರೆ ಹಣವನ್ನು ಕದ್ದಿದ್ದಾರೆ. ಬಳಿಕ ಠಾಣೆಯಿಂದ ತುಸು ದೂರವಿರುವ ಮೇಗಿನ ಪೇಟೆಯಲ್ಲಿರುವ ಫೆಲಿಸ್ ಪಾಯಸ್ ಅವರಿಗೆ ಸೇರಿದ ಕೋಳಿಯ ಅಂಗಡಿಯ ಕಿಟಕಿ ಕಿತ್ತು ತೆಗೆದು ಒಳ ನುಗ್ಗಿದ ಕಳ್ಳರು, ಅಲ್ಲಿ ಕೂಡ ಒಂದಷ್ಟು ನಗದು ದೋಚಿದ್ದಾರೆ.

More from the blog

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ನೆಟ್ಲಮುಡ್ನೂರು ಗ್ರಾ. ಪಂ ಮುಂಭಾಗದಲ್ಲಿ ಪ್ರೊಟೆಸ್ಟ್..

ಬಂಟ್ವಾಳ :  ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ನೆಟ್ಲ ಮುಡ್ನೂರು ಶಕ್ತಿ ಕೇಂದ್ರದ ವತಿಯಿಂದ ನೆರಳಕಟ್ಟೆ(ಗಣೇಶ ನಗರ) ಪಂಚಾಯತ್ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ...

ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ವಿಟ್ಲ: ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ 18 ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ...