Wednesday, January 28, 2026

ವಿಟ್ಲ ಲಯನ್ಸ್ ಕ್ಲಬ್‌ನಿಂದ ಹಲವಾರು ಕೊಡುಗೆಗಳ ಹಸ್ತಾಂತರ

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್‌ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದ ಪ್ರಯುಕ್ತ ಹಲವಾರು ಫಲಾನುಭವಿಗಳಿಗೆ ಧನ ಸಹಾಯ ವಿತರಣೆ ಹಾಗೂ ನಾನಾ ಸವಲತ್ತುಗಳ ವಿತರಣೆ ಕಾರ್ಯಕ್ರಮ ಭಾನುವಾರ ನಡೆಯಿತು.
ಬೆಳಿಗ್ಗೆ ಕೆಲಿಂಜದಲ್ಲಿ ಜಿಲ್ಲಾ ಗವರ್ನರ್ ರೊನಾಲ್ಡ್ ಜೋಮ್ಸ್ ಹಾಗೂ ಅನಿತಾ ಜೋಮ್ಸ್ ಅವರನ್ನು ಸ್ವಾಗತಿಸಲಾಯಿತು.
ಜಿಲ್ಲಾ ಗವರ್ನರ್ ರೊನಾಲ್ಡ್ ಜೋಮ್ಸ್ ಅವರು ವಿವಿಧ ಸವಲತ್ತುಗಳನ್ನು ವಿತರಿಸಿದರು. ಕೆಲಿಂಜ ಅಂಗನವಾಡಿ ಕೇಂದ್ರಕ್ಕೆ ಸ್ಟೀಲ್ ಕಪಾಟು ಹಸ್ತಾಂತರ, ಮಂಗಳಪದವು ಅಂಗನವಾಡಿ ಕೇಂದ್ರ ಉದ್ಯಾನ ನವೀಕರಣ ಉದ್ಘಾಟನೆ, ಒಕ್ಕೆತ್ತೂರು ಸರ್ಕಾರಿ ಶಾಲೆಗೆ ದಿವಾಂಗತ ಸುಮಿತ್ರ ಟೀಚರ್ ಅವರ ಸ್ಮರಣಾರ್ಥ ಅವರ ಸಹೋದರಿ ಪುಷ್ಪಲತಾ ಅವರು ನಲಿಕಲಿ ಕಲಿಕೆಗೆ ನೀಡಿದ ೫೦ ಸಾವಿರ ವೆಚ್ಚದ ಡೆಸ್ಕ್ ಹಸ್ತಾಂತರ ಮಾಡಲಾಯಿತು. ಬೊಳಂತಿಮೊಗರು ಶಾಲೆಗೆ ಯುಪಿಎಸ್ ಬ್ಯಾಟರಿ ಹಸ್ತಾಂತರ, ಕಂಬಳಬೆಟ್ಟು ಎಂಬಲ್ಲಿಯ ವರ್ಶಿನಿ ಅವರ ಮನೆಗೆ ಭೇಟಿ ನೀಡಿ ಧನ ಸಹಾಯ ವಿತರಿಸಲಾಯಿತು. ಚಂದಳಿಕೆ ಸರಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್‌ಗೆ ಪ್ರೋಜೆಕ್ಟರ್ ಮತ್ತು ಪ್ರಿಂಟರ್ ಹಸ್ತಾಂತರ ಮಾಡಲಾಯಿತು. ಕೊಡಂಗಾಯಿ ಸರ್ಕಾರಿ ಶಾಲೆಗೆ ಶುದ್ಧಿಕರೀಸುವ ನೀರಿನ ಘಟಕ ಹಸ್ತಾಂತರ, ಬೊಬ್ಬೆಕೇರಿಯಲ್ಲಿ ನವೀಕರಣಗೊಂಡ ಸ್ವಾಗತ ನಾಮಫಲಕವನ್ನು ಉದ್ಘಾಟಿಸಲಾಯಿತು. ಡ್ಯನಡ್ಕ ಶಾಲೆಯಲ್ಲಿ ಎರಡು ಗೇಟ್‌ಗಳನ್ನು ಉದ್ಘಾಟಿಸಲಾಯಿತು. ಶಿವಾಜಿನಗರ ನಿವಾಸಿ ಅನಾರೋಗ್ಯ ಪೀಡಿತ ಭರತ್ ಅವರ ಚಿಕಿತ್ಸೆಗೆ ಧನ ಸಹಾಯ ವಿತರಿಸಲಾಯಿತು. ನೀರಕಣಿಯಲ್ಲಿ ಬಸ್ ತಂಗುದಾಣ ನವೀಕರಣ ಉದ್ಘಾಟಿಸಲಾಯಿತು.
ಈ ಸಂದರ್ಭ ಪ್ರಥಮ ಉಪರಾಜ್ಯಪಾಲ ಡಾ.ಗೀತಾಪ್ರಕಾಶ್, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪೆಲ್ತಡ್ಕ, ಕಾರ್ಯದರ್ಶಿ ಮನೋಜ್ ಕುಮಾರ್ ರೈ, ಕೋಶಾಧಿಕಾರಿ ಮೊಹಮ್ಮದ್ ಖಲಂದರ್ ಹಾಗೂ ಲಯನ್ಸ್ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.

 

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...