Monday, February 10, 2025

ಮದ್ಯ ಮಾರಾಟ ವಿರುದ್ದ ವಿದ್ಯಾರ್ಥಿ ರ್‍ಯಾಲಿ

ವಿಟ್ಲ: ಹೊಸ ವರ್ಷಾಚರಣೆಯ ನೆಪದಲ್ಲಿ ಅಧಿಕ ಮದ್ಯ ಮಾರಾಟವಾಗುವುದರಿಂದ ಸಾರ್ವಜನಿಕ ಶಾಂತಿ ಭಂಗವಾಗುತ್ತದೆ. ಜನಜಾಗೃತಿಗಾಗಿ ಮದ್ಯ ಮಾರಾಟ ವಿರುದ್ದ ವಿಟ್ಲ ಡಿವಿಷನ್ ಟೀಂ ಹಸನೈನ್ ವತಿಯಿಂದ ವಿದ್ಯಾರ್ಥಿ ರ್‍ಯಾಲಿ ನಡೆಯಿತು.
ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಶರಫಿ ಮೂಡಂಬೈಲು ಅವರ ನೇತೃತ್ವದಲ್ಲಿ ವಿಟ್ಲದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಅಶ್-ಅರಿಯ್ಯಾ ಟೌನ್ ಮಸ್ಜಿದ್ ವರೆಗೆ ಸಾಗಿದ ರ್ಯಾಲಿಯು ಹಳೆ ಬಸ್ ನಿಲ್ದಾಣದ ಬಳಿ ಸಮಾರೋಪಗೊಂಡಿತು.
ಎಸ್.ಜೆ.ಯು ನಾಯಕರಾದ ಜಿ.ಎಂ ಸುನ್ನೀ ಫೈಝಿ ಪೆರುವಾಯಿ ದುಆದ ಮೂಲಕ ರ್‍ಯಾಲಿ ಚಾಲನೆ ನೀಡಿದರು.ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಕೆ.ಎಂ ಮುಸ್ತಫಾ ಹಿಮಮಿ ನಈಮಿ ಸಂದೇಶ ಭಾಷಣ ಮಾಡಿದರು.
ಎಸ್.ಎಂ.ಎ ಪುತ್ತೂರು ವಿಭಾಗದ ಅಧ್ಯಕ್ಷ ಹಾಜಿ ಹಮೀದ್ ಕೊಡಂಗಾಯಿ ಮಾತನಾಡಿದರು, ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕಾರ್ಯದರ್ಶಿ ಸಲೀಂ ಹಾಜಿ ಬೈರಿಕಟ್ಟೆ ಮದ್ಯಪಾನ ವಿರುದ್ದ ಪ್ರತಿಜ್ಞೆ ಬೋಧಿಸಿದರು. ರ್‍ಯಾಲಿಯುದ್ದಕ್ಕೂ ಮದ್ಯಪಾನ ವಿರೋದಿ ಆಂದೋಲನದ ಕರಪತ್ರ ವಿತರಿಸಲಾಯಿತು.
ಎಸ್.ವೈ.ಎಸ್ ವಿಟ್ಲ ಸೆಂಟರ್ ಅಧ್ಯಕ್ಷ ಅಬ್ದುಲ್ ಹಮೀದ್ ಸಖಾಫಿ ಪಾಡಿ, ಡಿವಿಷನ್ ಕೋಶಾಧಿಕಾರಿ ಸಿ.ಎಚ್ ಅಬ್ದುಲ್ ಕಾದರ್ ಕೊಡಂಗಾಯಿ, ಕ್ಯಾಂಪಸ್ ಕಾರ್‍ಯದರ್ಶಿ ಶಾಹಿರ್ ಕೊಳಂಬೆ, ಡಿವಿಷನ್ ನಾಯಕ ರಹೀಂ ಸಖಾಫಿ, ರಝಾಕ್ ಪೆಲ್ತಡ್ಕ, ಎಸ್.ವೈ.ಎಸ್ ನಾಯಕ ಎಂಕೆಎಂ ಹನೀಫ್ ಸಖಾಫಿ ಮೊದಲಾದವರು ಉಪಸ್ಥಿತರಿದ್ದರು.
ಟೀಂ ಹಸನೈನ್ ಡಿವಿಷನ್ ಗೈಡ್ ಅಬೂಬಕ್ಕರ್ ಹಿಮಮಿ ಸಖಾಫಿ ಸ್ವಾಗತಿಸಿ, ಡಿವಿಷನ್ ಕಾರ್‍ಯದರ್ಶಿ ಜಂಶಾದ್ ಕಂಬಳಬೆಟ್ಟು ವಂದಿಸಿದರು.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...