Wednesday, July 9, 2025

’ಯಕ್ಷ ದ್ವಾದಶಾಮೃತಮ್’ ಪುಸ್ತಕ ಬಿಡುಗಡೆ

ವಿಟ್ಲ: ಬರೆಕರೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಶಿತ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದಿಂದ ಶ್ರೀದೇವೀ ಮಹಾತ್ಮೆ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಡಾ. ಪಟ್ಟಾಜೆ ಗಣೇಶ ಭಟ್ ವಿರಚಿತ ಹನ್ನೆರಡು ಯಕ್ಷಗಾನ ಪ್ರಸಂಗಗಳ ’ಯಕ್ಷ ದ್ವಾದಶಾಮೃತಮ್’ ಪುಸ್ತಕ ಬಿಡುಗಡೆ ನಡೆಯಿತು.
ಪುಸ್ತಕವನ್ನು ವಿಶ್ವವಿನೋದ ಬನಾರಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರೋಹಿತರಾದ ಕಲ್ಲುಕುಟ್ಟಿಮೂಲೆ ವೇ. ಮೂ.ರವಿಶಂಕರ ಭಟ್ಟ ಅವರು ವಹಿಸಿದ್ದರು. ರವಿಶಂಕರ ವಳಕ್ಕುಂಜ, ರಾಮ ಜೋಯಿಸ ಬೆಳ್ಳಾರೆ ಅವರನ್ನು ಸನ್ಮಾನಿಸಲಾಯಿತು.
ಮೇಳದ ಅರ್ಚಕ ಶ್ರೀಕಾಂತ ಭಟ್ ಶ್ರೀದೇವಿಯ ಆರಾಧನೆ ನಡೆಯಿತು. ರವಿಶಂಕರ ಭಟ್ಟ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಹವನ, ರುದ್ರಾಭಿಶೇಕ, ಪೂಜೆ, ಸಾಯಂಕಾಲ ದುರ್ಗಾಪೂಜೆಯ ಮೂಲಕ ದೇವತೋಪಾಸನೆ ನಡೆಯಿತು.
ಸರ್ಪಂಗಳ ಈಶ್ವರ ಭಟ್, ನಾಲ್ಕನೇ ಮೇಳದ ಮ್ಯಾನೇಜರ್ ಪ್ರಕಾಶ್ ಶೆಟ್ಟಿ, ಡಾ. ಗಣೇಶ ಭಟ್, ಪದ್ಯಾಣ ಗಣಪತಿ ಭಟ್, ಸೂರ್ಯನಾರಾಯಣ, ಹರಿನಾರಾಯಣ, ಶಿವ ನಾರಾಯಣ, ರವಿನಾರಾಯಣ, ಕಿಶೋರ ಉಪಸ್ಥಿತರಿದ್ದರು. ಸತ್ಯಭಾಮೆ ಪ್ರಾರ್ಥಿಸಿದರು. ವಸಂತಕೃಷ್ಣ ಸ್ವಾಗತಿಸಿ, ಪ್ರಸ್ತಾವನೆಗೈದರು. ಕೇಶವ ಪ್ರಶಾಂತ ವಂದಿಸಿದರು. ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...