Saturday, January 31, 2026

’ಯಕ್ಷ ದ್ವಾದಶಾಮೃತಮ್’ ಪುಸ್ತಕ ಬಿಡುಗಡೆ

ವಿಟ್ಲ: ಬರೆಕರೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಶಿತ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದಿಂದ ಶ್ರೀದೇವೀ ಮಹಾತ್ಮೆ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಡಾ. ಪಟ್ಟಾಜೆ ಗಣೇಶ ಭಟ್ ವಿರಚಿತ ಹನ್ನೆರಡು ಯಕ್ಷಗಾನ ಪ್ರಸಂಗಗಳ ’ಯಕ್ಷ ದ್ವಾದಶಾಮೃತಮ್’ ಪುಸ್ತಕ ಬಿಡುಗಡೆ ನಡೆಯಿತು.
ಪುಸ್ತಕವನ್ನು ವಿಶ್ವವಿನೋದ ಬನಾರಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರೋಹಿತರಾದ ಕಲ್ಲುಕುಟ್ಟಿಮೂಲೆ ವೇ. ಮೂ.ರವಿಶಂಕರ ಭಟ್ಟ ಅವರು ವಹಿಸಿದ್ದರು. ರವಿಶಂಕರ ವಳಕ್ಕುಂಜ, ರಾಮ ಜೋಯಿಸ ಬೆಳ್ಳಾರೆ ಅವರನ್ನು ಸನ್ಮಾನಿಸಲಾಯಿತು.
ಮೇಳದ ಅರ್ಚಕ ಶ್ರೀಕಾಂತ ಭಟ್ ಶ್ರೀದೇವಿಯ ಆರಾಧನೆ ನಡೆಯಿತು. ರವಿಶಂಕರ ಭಟ್ಟ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಹವನ, ರುದ್ರಾಭಿಶೇಕ, ಪೂಜೆ, ಸಾಯಂಕಾಲ ದುರ್ಗಾಪೂಜೆಯ ಮೂಲಕ ದೇವತೋಪಾಸನೆ ನಡೆಯಿತು.
ಸರ್ಪಂಗಳ ಈಶ್ವರ ಭಟ್, ನಾಲ್ಕನೇ ಮೇಳದ ಮ್ಯಾನೇಜರ್ ಪ್ರಕಾಶ್ ಶೆಟ್ಟಿ, ಡಾ. ಗಣೇಶ ಭಟ್, ಪದ್ಯಾಣ ಗಣಪತಿ ಭಟ್, ಸೂರ್ಯನಾರಾಯಣ, ಹರಿನಾರಾಯಣ, ಶಿವ ನಾರಾಯಣ, ರವಿನಾರಾಯಣ, ಕಿಶೋರ ಉಪಸ್ಥಿತರಿದ್ದರು. ಸತ್ಯಭಾಮೆ ಪ್ರಾರ್ಥಿಸಿದರು. ವಸಂತಕೃಷ್ಣ ಸ್ವಾಗತಿಸಿ, ಪ್ರಸ್ತಾವನೆಗೈದರು. ಕೇಶವ ಪ್ರಶಾಂತ ವಂದಿಸಿದರು. ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...