Friday, June 27, 2025

ವಿಟ್ಲದಲ್ಲಿ ವಿಜೃಂಭಿಸಿದ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ

ವಿಟ್ಲ: ಇತಿಹಾಸ ಪ್ರಸಿದ್ದ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವವು ಜ.21ರಂದು ರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು. ರಾತ್ರಿ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಆಗಮಿಸಿದ ಬಳಿಕ ದೇವರ ಬಲಿ ಉತ್ಸವ ನಡೆಯಿತು.

ಬಳಿಕ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ಸಿಡಿಮದ್ದು ಪ್ರದರ್ಶನದ ಬಳಿಕ ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಮಹಾರಥೋತ್ಸವ ’ಇಟ್ಟೆಲಾಯನೊ’ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು. ರಥೋತ್ಸವದದ ಬಳಿಕ ದೇವರ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಿತು.


ಬೆಳಗ್ಗೆ ಕ್ಷೇತ್ರದಲ್ಲಿ ದರ್ಶನ ಬಲಿ, ರಾಜಾಂಗಣದ ಬಟ್ಲು ಕಾಣಿಕೆ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು. ಸಾಂಸ್ಕೃತಿಕ ಕಾರ್‍ಯಕ್ರಮದ ಅಂಗವಾಗಿ ರಾತ್ರಿ ವಿಟ್ಲ ಮಾದರಿ ಶಾಲಾ ವಠಾರದಲ್ಲಿ ಪಟ್ಲ ಯಕ್ಷಾಭಿಮಾನಿಗಳ ಬಳಗ ವಿಟ್ಲ ಅರ್ಪಿಸುವ ಬಪ್ಪನಾಡು ಮೇಳದವರಿಂದ ಬೊಳ್ಳಿದ ಬೊಲ್ಗುಡೆ ಯಕ್ಷಗಾನ ಬಯಲಾಟ ನಡೆಯಿತು.

ಹರಿದುಬಂದ ಭಕ್ತಸಮೂಹ….: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಊರ ಪರವೂರಿನ ಸಾವಿರಾರು ಭಕ್ತಾಧಿಗಳು ಬೆಳಗ್ಗಿನಿಂದಲೇ ದೇವಾಲಯಕ್ಕೆ ಆಗಮಿಸಲಾರಂಭಿಸಿದರು. ಮುಖ್ಯ ರಸ್ತೆಯಿಂದ ದೇವಾಲಯಕ್ಕೆ ತೆರಳುವ ಎಲ್ಲಾ ಒಳರಸ್ತೆಯಲ್ಲಿ ಬೆಳಿಗ್ಗಿನಿಂದಲೇ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಭಕ್ತಾಧಿಗಳು ತಮ್ಮ ವಾಹನವನ್ನು ದೇವಳದ ಹೊರಭಾಗದಲ್ಲಿ ನಿಲ್ಲಿಸಿ ನಡೆದುಕೊಂಡೇ ದೇವಸ್ಥಾನಕ್ಕೆ ತಲುಪ ಬೇಕಾಯಿತು.

ಪೊಲೀಸ್ ಬಂದೋಬಸ್ತು..
ವಿಟ್ಲ ರಥೋತ್ಸವದ ಪ್ರಯುಕ್ತ ವಿವಿಧ ಕಡೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದ್ದು, ದೇವಾಲಯದ ಜಾತ್ರಾ ಗದ್ದೆ ಸಹಿತ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿಟ್ಲ ಠಾಣಾ ಎಸ್.ಐ. ಯಲ್ಲಪ್ಪರವರ ನೇತೃತ್ವದಲ್ಲಿ ವಿಶೇಷ ಬಂದೋ ಬಸ್ತ್‌ನ್ನು ಏರ್ಪಡಿಸಲಾಗಿತ್ತು. ಮೊದಲೇ ಕೆಲವೆಡೆ ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿದ್ದರೂ ಜಾತ್ರಾ ಪ್ರಯುಕ್ತ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಹೆಚ್ಚುವರಿಯಾಗಿ ಸಿ.ಸಿ ಕ್ಯಾಮರವನ್ನು ಅಳವಡಿಸಲಾಗಿತ್ತು. ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಕಳ್ಳರ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸರು ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ದೇವಸ್ಥಾನದ ಸಮೀಪ ಸಾರ್ವಜನಿಕರಿಗೆ ಸಹಾಯವಾಗಲೆಂದು ಪೊಲೀಸ್ ಔಟ್‌ಪೋಸ್ಟನ್ನು ತೆರೆಯಲಾಗಿತ್ತು.

 

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...