Tuesday, February 11, 2025

‘ಪ್ರತಿಭೆಗಳ ಅನಾವರಣಕ್ಕೆ ವೇದಿಕೆಗಳ ಅಗತ್ಯ’-ರಾಜಶೇಖರ್ ಕೋಟ್ಯಾನ್

ವಿಟ್ಲ: ಯುವವಾಹಿನಿ ನಡೆಸುತ್ತಿರುವ ನಾನಾ ಚಟುವಟಿಕೆಗಳು ಬಿಲ್ಲವ ಸಮಾಜದ ಪ್ರತಿಭಾನ್ವೇಷಣೆಗೆ ನೆರವಾಗುತ್ತಿದೆ ಎಂದು ಬಹುಭಾಷಾ ಚಲನಚಿತ್ರನಟ ರಾಜಶೇಖರ ಕೋಟ್ಯಾನ್ ಅಭಿಪ್ರಾಯಪಟ್ಟರು. ಅವರು ಅನಂತಾಡಿ ಬಾಕಿಲ ಕಂಬಳಗದ್ದೆಯಲ್ಲಿ ಭಾನುವಾರ ನಡೆದ ಯುವವಾಹಿನಿ ಅಂತರ್ ಘಟಕ ಕೋಟಿ-ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ ದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಯಾವುದೇ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಗಳ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಯುವವಾಹಿನಿ ಸಮಜದ ಅಭ್ಯುದಯಕ್ಕೆ ಪೂರಕವಾದ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮೀಣ ಪರಿಸರದ ನೆಲಜಲ, ಮಣ್ಣನ್ನು ಪ್ರೀತಿಸುವ ಇಂತಹಾ ಕ್ರೀಡಾಕೂಟಗಳು ಇಡೀ ಸಮಾಜಕ್ಕೆ ಹೊಸ ಚೈತನ್ಯ ನೀಡುತ್ತದೆ ಎಂದರು.
ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಅಧ್ಯಕ್ಷತೆ ವಹಿಸಿದ್ದರು. ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ನಾರಾಯಣ ಸಾಲ್ಯಾನ್, ಬಾಕಿಲ ವೈದ್ಯನಾಥೇಶ್ವರ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಪೂಜಾರಿ ಜಲ್ಲಿಗುಡ್ಡೆ, ಆಡಳಿತ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಮಾಡಾವು , ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷ ಈಶ್ವರ ಪೂಜಾರಿ ಹಿರ್ತಡ್ಕ , ಬಾಕಿಲ ವೈದ್ಯನಾಥೇಶ್ವರ ದೈವಸ್ಥಾನದ ಮೊಕ್ತೇಸರ ಜನಾರ್ದನ ಪೂಜಾರಿ ಬಾಕಿಲ, ಮಾಣಿ ಯುವವಾಹಿನಿ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಬಾಕಿಲ, ಕೇಂದ್ರ ಸಮಿತಿಯ ಕಾರ್‍ಯದರ್ಶಿ ಸುನಿಲ್ ಅಂಚನ್, ಸಲಹೆಗಾರ ರವಿಚಂದ್ರ ಮಾಣಿ, ಕ್ರೀಡಾ ನಿರ್ದೇಶಕಿ ಸುಪ್ರೀತಾ ಪೂಜಾರಿ, ಮಾಣಿ ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಪೂಜಾರಿ ಬಾಬನಕಟ್ಟೆ, ಮಾಣಿ ಯುವವಾಹಿನಿ ಘಟಕದ ಉಪಾಧ್ಯಕ್ಷ ಪ್ರಶಾಂತ್ ಅನಂತಾಡಿ , ಕಾರ್‍ಯದರ್ಶಿ ಸುಜಿತ್ ಅಂಚನ್ ಮಾಣಿ ಉಪಸ್ಥಿತರಿದ್ದರು.
ರಮೇಶ್ ಮುಜಲ ಸ್ವಾಗತಿಸಿದರು, ತ್ರಿವೇಣಿ ಮುಜಲ ವಂದಿಸಿದರು. ದಿನಕರ್ ಬರಿಮಾರು, ರಾಜೇಶ್ ಪೂಜಾರಿ, ಪ್ರೇಮನಾಥ್ ಕಾರ್‍ಯಕ್ರಮ ನಿರ್ವಹಿಸಿದರು.
ಹಾಸ್ಯಕಲಾವಿದರಾದ ಅನೀಶ್ ವೇಣೂರು, ಹಿತೇಶ್ ಕಾಪಿನಡ್ಕ, ಸತೀಶ್ ಬಂದಲೆ ಭಾಗವಹಿಸಿ ವಿಶೇಷ ಆಕರ್ಷಣೆ ನೀಡಿದರು.
ಪುತ್ತೂರು ಘಟಕಕ್ಕೆ ಸಮಗ್ರ ಪ್ರಶಸ್ತಿ:
ಪುತ್ತೂರು ಯುವವಾಹಿನಿ ಘಟಕ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರೆ, ಹಳೆಯಂಗಡಿ ಯುವವಾಹಿನಿ ಘಟಕ ದ್ವಿತೀಯ ಸ್ಥಾನ ಪಡೆಯಿತು. ಕೊಲ್ಯ ಯುವವಾಹಿನಿ ಘಟಕವು ಶಿಸ್ತು ಘಟಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

More from the blog

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...