Saturday, July 12, 2025

‘ಪ್ರತಿಭೆಗಳ ಅನಾವರಣಕ್ಕೆ ವೇದಿಕೆಗಳ ಅಗತ್ಯ’-ರಾಜಶೇಖರ್ ಕೋಟ್ಯಾನ್

ವಿಟ್ಲ: ಯುವವಾಹಿನಿ ನಡೆಸುತ್ತಿರುವ ನಾನಾ ಚಟುವಟಿಕೆಗಳು ಬಿಲ್ಲವ ಸಮಾಜದ ಪ್ರತಿಭಾನ್ವೇಷಣೆಗೆ ನೆರವಾಗುತ್ತಿದೆ ಎಂದು ಬಹುಭಾಷಾ ಚಲನಚಿತ್ರನಟ ರಾಜಶೇಖರ ಕೋಟ್ಯಾನ್ ಅಭಿಪ್ರಾಯಪಟ್ಟರು. ಅವರು ಅನಂತಾಡಿ ಬಾಕಿಲ ಕಂಬಳಗದ್ದೆಯಲ್ಲಿ ಭಾನುವಾರ ನಡೆದ ಯುವವಾಹಿನಿ ಅಂತರ್ ಘಟಕ ಕೋಟಿ-ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ ದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಯಾವುದೇ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಗಳ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಯುವವಾಹಿನಿ ಸಮಜದ ಅಭ್ಯುದಯಕ್ಕೆ ಪೂರಕವಾದ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮೀಣ ಪರಿಸರದ ನೆಲಜಲ, ಮಣ್ಣನ್ನು ಪ್ರೀತಿಸುವ ಇಂತಹಾ ಕ್ರೀಡಾಕೂಟಗಳು ಇಡೀ ಸಮಾಜಕ್ಕೆ ಹೊಸ ಚೈತನ್ಯ ನೀಡುತ್ತದೆ ಎಂದರು.
ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಅಧ್ಯಕ್ಷತೆ ವಹಿಸಿದ್ದರು. ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ನಾರಾಯಣ ಸಾಲ್ಯಾನ್, ಬಾಕಿಲ ವೈದ್ಯನಾಥೇಶ್ವರ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಪೂಜಾರಿ ಜಲ್ಲಿಗುಡ್ಡೆ, ಆಡಳಿತ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಮಾಡಾವು , ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷ ಈಶ್ವರ ಪೂಜಾರಿ ಹಿರ್ತಡ್ಕ , ಬಾಕಿಲ ವೈದ್ಯನಾಥೇಶ್ವರ ದೈವಸ್ಥಾನದ ಮೊಕ್ತೇಸರ ಜನಾರ್ದನ ಪೂಜಾರಿ ಬಾಕಿಲ, ಮಾಣಿ ಯುವವಾಹಿನಿ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಬಾಕಿಲ, ಕೇಂದ್ರ ಸಮಿತಿಯ ಕಾರ್‍ಯದರ್ಶಿ ಸುನಿಲ್ ಅಂಚನ್, ಸಲಹೆಗಾರ ರವಿಚಂದ್ರ ಮಾಣಿ, ಕ್ರೀಡಾ ನಿರ್ದೇಶಕಿ ಸುಪ್ರೀತಾ ಪೂಜಾರಿ, ಮಾಣಿ ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಪೂಜಾರಿ ಬಾಬನಕಟ್ಟೆ, ಮಾಣಿ ಯುವವಾಹಿನಿ ಘಟಕದ ಉಪಾಧ್ಯಕ್ಷ ಪ್ರಶಾಂತ್ ಅನಂತಾಡಿ , ಕಾರ್‍ಯದರ್ಶಿ ಸುಜಿತ್ ಅಂಚನ್ ಮಾಣಿ ಉಪಸ್ಥಿತರಿದ್ದರು.
ರಮೇಶ್ ಮುಜಲ ಸ್ವಾಗತಿಸಿದರು, ತ್ರಿವೇಣಿ ಮುಜಲ ವಂದಿಸಿದರು. ದಿನಕರ್ ಬರಿಮಾರು, ರಾಜೇಶ್ ಪೂಜಾರಿ, ಪ್ರೇಮನಾಥ್ ಕಾರ್‍ಯಕ್ರಮ ನಿರ್ವಹಿಸಿದರು.
ಹಾಸ್ಯಕಲಾವಿದರಾದ ಅನೀಶ್ ವೇಣೂರು, ಹಿತೇಶ್ ಕಾಪಿನಡ್ಕ, ಸತೀಶ್ ಬಂದಲೆ ಭಾಗವಹಿಸಿ ವಿಶೇಷ ಆಕರ್ಷಣೆ ನೀಡಿದರು.
ಪುತ್ತೂರು ಘಟಕಕ್ಕೆ ಸಮಗ್ರ ಪ್ರಶಸ್ತಿ:
ಪುತ್ತೂರು ಯುವವಾಹಿನಿ ಘಟಕ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರೆ, ಹಳೆಯಂಗಡಿ ಯುವವಾಹಿನಿ ಘಟಕ ದ್ವಿತೀಯ ಸ್ಥಾನ ಪಡೆಯಿತು. ಕೊಲ್ಯ ಯುವವಾಹಿನಿ ಘಟಕವು ಶಿಸ್ತು ಘಟಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...