Thursday, January 29, 2026

ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ನೂತನ ಸಮಿತಿ ರಚನೆ

ವಿಟ್ಲ: ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಸಮಿತಿಯ ವಾರ್ಷಿಕ ಮಹಾಸಭೆಯು ಡಿವಿಷನ್ ಅಧ್ಯಕ್ಷರಾಗಿದ್ದ ಅಬ್ದುರ್ರಹ್ಮಾನ್ ಶರಫಿ ಮೂಡಂಬೈಲುರವರ ಅಧ್ಯಕ್ಷತೆಯಲ್ಲಿ ದಾರುನ್ನಜಾತ್ ಏಜ್ಯುಕೇಶನಲ್ ಸೆಂಟರ್ ಟಿಪ್ಪುನಗರದಲ್ಲಿ ನಡೆಯಿತು.
ಸಭೆಯನ್ನು ದಾರುನ್ನಜಾತ್ ಸಂಸ್ಥೆಯ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಹಿಮಮಿ ವಾರ್ಷಿಕ ವರದಿ ಮಂಡಿಸಿದರು, ಕೋಶಾಧಿಕಾರಿ ಸಿ.ಎಚ್.ಅಬ್ದುಲ್ ಕಾದರ್ ಕೊಡಂಗಾಯಿ ಲೆಕ್ಕಪತ್ರ ಮಂಡಿಸಿದರು. ನಂತರ ಝೋನ್ ಸಮಿತಿಯಿಂದ ವೀಕ್ಷಕರಾಗಿ ಆಗಮಿಸಿದ್ದ ದ.ಕ ಜಿಲ್ಲಾ ಈಸ್ಟ್ ಝೋನ್ ಸಮಿತಿಯ ಅಧ್ಯಕ್ಷರಾದ ಅಯ್ಯೂಬ್ ಮಹ್ಳರಿ ಹಾಗೂ ಹಾಫಿಳ್ ತೌಸೀಫ್ ಅಸ್’ಅದಿ ಕೆಮ್ಮಾನ್ ರವರ ನೇತೃತ್ವದಲ್ಲಿ 2020ನೇ ಸಾಲಿನ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ಅಬೂಬಕ್ಕರ್ ಹಿಮಮಿ ಸಖಾಫಿ ಮೇಗಿನಪೇಟೆ ವಿಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ಫಾಕ್ ಕೊಡಂಗಾಯಿ, ಕೋಶಾಧಿಕಾರಿಯಾಗಿ ಅಬ್ದುಲ್ ಜಲೀಲ್ ಒಕ್ಕೆತ್ತೂರು, ಕ್ಯಾಂಪಸ್ ಕಾರ್ಯದರ್ಶಿಯಾಗಿ ಸೈಫುದ್ದೀನ್ ಅಳಕೆಮಜಲ್, ಉಪಾಧ್ಯಕ್ಷರುಗಳಾಗಿ ರಫೀಕ್ ಸಅದಿ ಅಳಕೆಮಜಲ್ ಹಾಗೂ ಎಂ.ಐ.ಎಂ ಅಶ್ರಫ್ ಸಖಾಫಿ ಕನ್ಯಾನ, ಕಾರ್ಯದರ್ಶಿಗಳಾಗಿ ಹಸನ್ ಸಅದಿ ಕುಕ್ಕಿಲ ಹಾಗೂ ಅಬ್ದುಲ್ ರಝಾಕ್ ಬೈರಿಕಟ್ಟೆ ಇವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಡಿವಿಷನ್ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಅಬೂಬಕ್ಕರ್ ಸಖಾಫಿ ಮಂಗಿಲಪದವು, ರಹೀಂ ಸಖಾಫಿ ವಿಟ್ಲ, ಅಲ್-ಹಾಜ್ ರಝಾಕ್ ಸಖಾಫಿ ಕೆಲಿಂಜ ಹಾಗೂ ಕೆಸಿಎಫ್ ನಾಯಕರಾದ ಶೆರೀಫ್ ಮುಸ್ಲಿಯಾರ್ ವಿಟ್ಲ, ಎಸ್.ವೈ.ಎಸ್ ನಾಯಕರಾದ ಇಬ್ರಾಹಿಂ ಮುಸ್ಲಿಯಾರ್, ಎಸ್.ವೈ.ಎಸ್ ಟಿಪ್ಪುನಗರ ಬ್ರಾಂಚ್ ಅಧ್ಯಕ್ಷರಾದ ಇಬ್ರಾಹಿಂ ಮೊನುಚ್ಚ ಮೊದಲಾದವರು ಉಪಸ್ಥಿತರಿದ್ದರು.
ಅಬೂಬಕ್ಕರ್ ಹಿಮಮಿ ಸಖಾಫಿ ಸ್ವಾಗತಿಸಿದರು. ಅಶ್ಫಾಕ್ ಕೊಡಂಗಾಯಿ ವಂದಿಸಿದರು.

 

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...