Friday, February 7, 2025

ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಮಹಾಸಭೆ

ವಿಟ್ಲ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್-ಎಸ್‌ಎಸ್‌ಎಫ್ ವಿಟ್ಲ ಡಿವಿಷನ್ ಇದರ ವಾರ್ಷಿಕ ಮಹಾಸಭೆಯು ಬೈರಿಕಟ್ಟೆಯ ಎಸ್‌ಎಸ್‌ಎಫ್ ಕಚೇರಿಯಲ್ಲಿ ಡಿವಿಷನ್ ಅಧ್ಯಕ್ಷರಾದ ಹಾಜಿ ಅಬ್ದುಲ್ ರಝಾಕ್ ಸಖಾಫಿ ಕೆಲಿಂಜರವರ ಅಧ್ಯಕ್ಷತೆಯಲ್ಲಿ ನಡೆಯಿತು, ದಾರುಲ್ ಅಶ್-ಅರಿಯ್ಯಾ ಮ್ಯಾನೇಜರ್ ಮಹಮ್ಮದಲಿ ಸಖಾಫಿ ಸುರಿಬೈಲು ರವರು ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಸೆಕ್ಟರ್ ಪ್ರಧಾನ ಕಾರ್‍ಯದರ್ಶಿ ಅಬ್ದುಲ್ ರಝಾಕ್ ಪೆಲ್ತಡ್ಕ ವಾರ್ಷಿಕ ವರದಿ ವಾಚಿಸಿದರು. ಕ್ಯಾಂಪಸ್ ಕಾರ್‍ಯದರ್ಶಿ ಜಂಶಾದ್ ಕಂಬಳಬೆಟ್ಟು ಕ್ಯಾಂಪಸ್ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ಅಬ್ದುಲ್ ರೆಹಮಾನ್ ಶರಫಿ ಮೂಡಂಬೈಲು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು.
ಕಾರ್‍ಯಕ್ರಮದಲ್ಲಿ ಎಸ್‌ವೈಎಸ್ ವಿಟ್ಲ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಹಮೀದ್ ಸಖಾಫಿ ಪಾಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿ.ಇ(ಸಿವಿಲ್) ಪದವಿ ಪಡೆದ ಡಿವಿಷನ್ ಕ್ಯಾಂಪಸ್ ಕಾರ್‍ಯದರ್ಶಿಯಾಗಿದ್ದ ಜಂಶಾದ್ ಕಂಬಳಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಸಮಿತಿಯಿಂದ ವೀಕ್ಷಕರಾಗಿ ಆಗಮಿಸಿದ ಅಬ್ದುಲ್ ರಶೀದ್ ಹಾಜಿ ವಗ್ಗರವರ ನೇತೃತ್ವದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಶರಫಿ ಮೂಡಂಬೈಲು, ಪ್ರಧಾನ ಕಾರ್‍ಯದರ್ಶಿಯಾಗಿ ವಿ.ಎಂ ಅಬೂಬಕ್ಕರ್ ಹಿಮಮಿ ಸಖಾಪಿ, ಕೋಶಾಧಿಕಾರಿಯಾಗಿ ಸಿ.ಹೆಚ್. ಅಬ್ದುಲ್ ಖಾದರ್ ಕೊಡಂಗಾಯಿ, ಕ್ಯಾಂಪಸ್ ಕಾರ್‍ಯದರ್ಶಿಯಾಗಿ ಶಾಹಿರ್ ಕೊಳಂಬೆ, ಉಪಾಧ್ಯಕ್ಷರುಗಳಾಗಿ ಅಬ್ದುಲ್ ರಝಾಕ್ ಪೆಲ್ತಡ್ಕ ಹಾಗೂ ರಫೀಕ್ ಸಅದಿ ಅಳಕೆಮಜಲು,
ಕಾರ್ಯದರ್ಶಿಗಳಾಗಿ ಅಶ್ಪಾಕ್ ಕೊಡಂಗಾಯಿ ಹಾಗೂ ಜಂಶಾದ್ ಕಂಬಳಬೆಟ್ಟು ಹಾಗೂ ೨೧ ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆರಿಸಲಾಯಿತು
ಆಯ್ಕೆಯ ಸಂದರ್ಭದಲ್ಲಿ ವಿಟ್ಲ ಸೆಂಟರ್ ಪ್ರಧಾನ ಕಾರ್‍ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮಂಗಳಪದವು, ಎಂ.ಕೆ.ಎಂ ಸಖಾಫಿ ಕೊಡಂಗಾಯಿ, ಮುಸ್ತಫಾ ಕೋಡಪದವು, ಕೆಸಿಎಫ್ ನಾಯಕರಾದ ಸಿದ್ದೀಕ್ ಸಖಾಫಿ ಪೆರುವಾಯಿ ಮೊದಲಾದವರು ಉಪಸ್ಥಿತರಿದ್ದರು.
ರಝಾಕ್ ಪೆಲ್ತಡ್ಕ ಸ್ವಾಗತಿಸಿದರು. ನೂತನ ಪ್ರಧಾನ. ಕಾರ್‍ಯದರ್ಶಿ ಅಬೂಬಕ್ಕರ್ ಹಿಮಮಿ ವಂದಿಸಿದರು.



More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...