Saturday, July 12, 2025

ಕೋಮುಪ್ರಚೋದಕ ಬರಹ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ವೈರಸ್ ಕುರಿತು ಕೋಮುಪ್ರಚೋದಕ ಬರಹ ಹಾಕಿ ಸಮಾಜ ಸ್ವಾಸ್ಥ್ಯ ಕೆಡವಲು ಪ್ರಯತ್ನಿಸಿದಾತನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡು ಎಚ್ಚರಿಕೆ ಹಾಗೂ ನೋಟೀಸ್ ನೀಡಿ ಕಳುಹಿಸಿದ್ದಾರೆ.

ವಿಟ್ಲ ಕಸಬಾ ಗ್ರಾಮದ ಹೈಸ್ಕೂಲ್ ಶಾಲಾ ಬಳಿ ಕೂಜಪ್ಪಾಡಿ ನಿವಾಸಿ ಜಯಕರ ಆಚಾರ್ಯ ಎಂಬವರು ಪೇಸ್ ಬುಕ್ ಪೇಜ್ ನಲ್ಲಿ ಕೋಮು ಪ್ರಚೋದನೆ ಬರಹ ಬರೆದಿದ್ದರು.

ಅದ್ರಂತೆ ವಿಟ್ಲ ಪೊಲೀಸರು ಆರೋಪಿಯ ಜಾಲನ್ನ ಹಿಡಿದು ಅತನನ್ನು ವಶಕ್ಕೆ ಪಡೆದುಕೊಂಡು ನೋಟೀಸ್ ನೀಡಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ, ಪ್ರಚೋದನಕಾರಿ ಬರಹಕ್ಕೆ ಕಾಮೆಂಟ್ ಹಾಕಿದ ವಿಟ್ಲ ಮೂವರನ್ನು ಠಾಣೆಗೆ ಕರೆದುಕೊಂಡು ಬಂದ ಠಾಣೆ ಎಸ್ಸೈ ವಿನೋದ್ ರೆಡ್ಡಿ ಎಚ್ಚರಿಕೆ ನೀಡಿ, ಮುಚ್ಚಲಿಕೆ ಬರೆಸಿ ಮನೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಟ್ಲ ಮುಸ್ಲಿಂ ಒಕ್ಕೂಟದ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಫೇಸ್ಬುಕ್ ನಲ್ಲಿ ಆರೋಪಿ ಬರೆದದ್ದೇನು…?
“ಅಲ್ಲಾಹನ ದುಬೈಯಿಂದ ಬಂದವರಿಂದ ಪವಿತ್ರ ಭಾರತದ ನೆಲದಲ್ಲಿ ಕೊರೋನ ವೈರಸ್ ಹರಡುತ್ತಿದೆ. ದುಬೈಯಿಂದ ಕೇರಳಕ್ಕೆ ಬಂದಿರುವ ಎಲ್ಲಾ ಹರಾಮಿ ಮುಲ್ಲಾಗಳಿಗೂ ಕೊರೋನ ವೈರಸ್ ಪಾಸಿಟಿವ್. ಹಿಂದೂಗಳೇ ಯೋಚಿಸಿ ಪವಿತ್ರ ಭಾರತಕ್ಕೆ ಕಂಟಕ ಎಲ್ಲಿಂದ ಸುರುವಾಗುವುದು ಎಂದು. ಏಸು, ಅಲ್ಲಾಹ್ ಇವರಿಂದಲೇ ಭಾರತಕ್ಕೆ ಕಂಟಕ. ಇವರ ಬೇರು ಭಾರತದಲ್ಲಿ ಕಿತ್ತು ಬಿಸಾಕಬೇಕಿದೆ” ಹೀಗೆಂದು ಆರೋಪಿ ಜಯಕರ ಆಚಾರ್ಯ ಕಮೆಂಟ್ ಮಾಡಿದ್ದ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...