Monday, July 7, 2025

ಲೈಂಗಿಕ ದೌರ್ಜನ್ಯ ಆರೋಪಿ ಸಲಾಂ ಬಂಧನ: ವಿಟ್ಲ ಎಸ್.ಐ.ಯಲ್ಲಪ್ಪ ಕಾರ್ಯಚರಣೆ

ಬಂಟ್ವಾಳ; ಮಾಣಿ ಬಾಲಕಿಯೋರ್ವಳ ಲೈಂಗಿಕ ದೌರ್ಜನ್ಯ  ಪ್ರಕರಣ ವೊಂದಕ್ಕೆ ಸಂಭವಿಸಿದಂತೆ ಆರೋಪಿ ಯನ್ನು ವಿಟ್ಲ ಠಾಣಾ ಎಸ್ ಐ ಯಲ್ಲಪ್ಪ ಇಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.‌
ಮಾಣಿ ನಿವಾಸಿ ಅಬ್ದುಲ್ ಸಲಾಂ ಯಾನೆ ಸಲಾಂ ( 38) ಬಂಧಿತ ಆರೋಪಿ.‌
ಕಳೆದ ವಾರ ಮಾಣಿಯ ಬಾಲಕಿಯೋರ್ವಳು ಮೊಬೈಲ್ ಅಂಗಡಿಗೆ ಮೊಬೈಲ್ ಕರೆನ್ಸಿ ಹಾಕಲು ಬಂದ ವೇಳೆ ಬಾಲಕಿಯ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ ಎಂದು ಆರೋಪಿಸಿ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅ ಬಳಿಕ ಅನೇಕ ಊಹಾಪೋಹಗಳು ಕೂಡ ಬಂದಿತ್ತು.‌
ಪ್ರಕರಣವನ್ನು ಕೈಗೆತ್ತಿಕೊಂಡ ವಿಟ್ಲ ಠಾಣಾ ಎಸ್.ಐ.ಯಲ್ಲಪ್ಪ ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.‌
ತಲೆ ಮರೆಸಿಕೊಂಡು ಪೋಲೀಸರಿಗೆ ತಲೆನೋವಾಗಿದ್ದ ಆರೋಪಿ ಯನ್ನು ಇಂದು ಮದ್ಯಾಹ್ನ ಗಡಿಯಾರ ಜಂಕ್ಸ್ ನ್  ಬಳಿಯಲ್ಲಿ ವಶಕ್ಕೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಆರೋಪಿಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಾರ್ಯಚರಣೆ ಯಲ್ಲಿ ಸಿಬ್ಬಂದಿ ಗಳಾದ ಜಯಕುಮಾರ್, ಬಾಲಕೃಷ್ಣ, ಲೋಕೇಶ್, ರಕ್ಷಿತ್ ಭಾಗವಹಿಸಿದ್ದರು.

More from the blog

ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ವ್ಯಸನಗಳು ವ್ಯಕ್ತಿಯ ಆರೋಗ್ಯ ಕುಟುಂಬ ಮತ್ತು ಸಮಾಜದ ಮೇಲೆ ಪ್ರಭಾವವನ್ನು ಬೀರುತ್ತವೆ, ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿ ಆರ್ಥಿಕ ನಷ್ಟವನ್ನು ಉಂಟು ಮಾಡುವುದಲ್ಲದೆ ಕುಟುಂಬದಲ್ಲಿ ಕಲಹ ಮಾನಸಿಕ...

ಏಮಾಜೆ ಶಾಲೆ : ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ..

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ...

ಬೆಂಜನಪದವು ಪ್ರೌಢಶಾಲೆ : ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ..

ಬಂಟ್ವಾಳ: ಇಂದು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ನಡೆಯಿತು. ಶಾಲಾ ಸಂಸತ್ತಿನ ಮುಖ್ಯ ಮಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಮಂತ್ರಿಗಳಿಗೆ ರಾಜ್ಯಪಾಲರು ಪ್ರಮಾಣ...

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...